ಮಂಡ್ಯ : ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾರ್ಡ್ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದೆ, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ.
ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…