BREAKING NEWS

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ಹೈಕೋರ್ಟ್ ಆದೇಶ

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

2001ರಲ್ಲಿ ತೆಹಲ್ಕಾ ಕುಟುಕು ಕಾರ್ಯಾಚರಣೆ ನಡೆದಿತ್ತು. ಈ ವೇಳೆ ಅಹ್ಲುವಾಲಿಯಾ ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಭ್ರಷ್ಟಾಚಾರದ ಗಂಭೀರ ಆರೋಪಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ತನ್ನ ಘನತೆ ಕಳೆದುಕೊಂಡಿರುವುದು ಮಾತ್ರವಲ್ಲದೆ ಅವರ ಚಾರಿತ್ರ್ಯಕ್ಕೂ ಕಳಂಕ ಉಂಟಾಗಿದ್ದು ಫಿರ್ಯಾದಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಹೇಳಿ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠ ಈ ಆದೇಶ ನೀಡಿದೆ.

ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರು ಸಲ್ಲಿಸಿದ್ದ ಮೊಕದ್ದಮೆಯನ್ನು ಪುರಸ್ಕರಿಸಿದ್ದ ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿ ನೀನಾ ಬನ್ಸಲ್ ಕೃಷ್ಣ ಅವರು, ಭಾರತೀಯ ಸೇನಾ ಅಧಿಕಾರಿಗೆ ಮಾನಹಾನಿ ಮಾಡಿದ್ದಕ್ಕಾಗಿ ತರುಣ್ ತೇಜ್‌ಪಾಲ್ ಮತ್ತು ಇಬ್ಬರು ಪತ್ರಕರ್ತರಾದ ಅನಿರುದ್ಧ್ ಬೆಹ್ಲ್ ಮತ್ತು ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು 2 ಕೋಟಿ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಆದೇಶಿಸಿದೆ.

ಈ ಮೊತ್ತವನ್ನು ಸುದ್ದಿ ಪೋರ್ಟಲ್ Tehelka.com, ಅದರ ಮಾಲೀಕ ಕಂಪನಿ M/s ಬಫಲೋ ಕಮ್ಯುನಿಕೇಷನ್ಸ್, ಅದರ ಮಾಲೀಕರಾದ ತರುಣ್ ತೇಜ್ಪಾಲ್ ಮತ್ತು ಅನಿರುದ್ಧ್ ಬೆಹ್ಲ್ ಮತ್ತು ಮ್ಯಾಥ್ಯೂ ಸ್ಯಾಮ್ಯುಯೆಲ್ ಪಾವತಿಸಬೇಕಿದೆ.

ಪ್ರಾಮಾಣಿಕ ಸೇನಾಧಿಕಾರಿಯ ಪ್ರತಿಷ್ಠೆಗೆ ಧಕ್ಕೆ ಉಂಡು ಮಾಡಿರುವ ಮತ್ತೊಂದು ದೊಡ್ಡ ಪ್ರಕರಣ ಇಲ್ಲ. ಇನ್ನು ಘಟನೆ ನಡೆದು 23 ವರ್ಷಗಳ ನಂತರ ಕ್ಷಮೆಯಾಚಿಸುವುದು ಅಸಮರ್ಪಕ ಮಾತ್ರವಲ್ಲದೆ ಅಸಂಬದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

2001ರಲ್ಲಿ ನ್ಯೂಸ್ ಪೋರ್ಟಲ್‌ನಿಂದ ಉದ್ದೇಶಿತ ಕುಟುಕು ಕಾರ್ಯಾಚರಣೆ ಬಿಡುಗಡೆ ಮಾಡಲಾಗಿತ್ತು. ಆದಾಗ್ಯೂ, ನ್ಯೂಸ್ ಪೋರ್ಟಲ್‌ನೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಪ್ರಶ್ನಾರ್ಹ ಸುದ್ದಿಯನ್ನು ಪ್ರಸಾರ ಮಾಡಿದ ಝೀ ಟೆಲಿಫಿಲ್ಮ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳ ಕಡೆಯಿಂದ ಫಿರ್ಯಾದುದಾರರು ಯಾವುದೇ ಮಾನನಷ್ಟ ಕೃತ್ಯವನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ನ್ಯೂಸ್ ಪೋರ್ಟಲ್  2001ರ ಮಾರ್ಚ್ 13ರಂದು ಹೊಸ ರಕ್ಷಣಾ ಸಾಧನಗಳ ಆಮದುಗೆ ಸಂಬಂಧಿಸಿದ ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರವನ್ನು ಆರೋಪಿಸುವ ಕುಟುಕು ಕಾರ್ಯಾಚರಣೆ ಕಾರ್ಯಕ್ರಮವನ್ನು ಪ್ರಕಟಿಸಿತು. ‘ಆಪರೇಷನ್ ವೆಸ್ಟ್ ಎಂಡ್’ ಸುದ್ದಿಯಲ್ಲಿ ತನಗೆ ಮಾನಹಾನಿ ಮಾಡಲಾಗಿದೆ ಎಂದು ವಕೀಲ ಚೇತನ್ ಆನಂದ್ ಮೂಲಕ ಫಿರ್ಯಾದಿ ಹೇಳಿಕೊಂಡಿದ್ದರು. ಅದನ್ನು ತಪ್ಪಾಗಿ ಪ್ರಸಾರ ಮಾಡಲಾಗಿದ್ದು, ಲಂಚ ಪಡೆದಿದ್ದಾರೆ ಎಂದು ವರದಿಯಾಗಿತ್ತು.

andolanait

Recent Posts

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

5 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

8 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

14 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

14 hours ago