BREAKING NEWS

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ಹೈಕೋರ್ಟ್ ಆದೇಶ

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

2001ರಲ್ಲಿ ತೆಹಲ್ಕಾ ಕುಟುಕು ಕಾರ್ಯಾಚರಣೆ ನಡೆದಿತ್ತು. ಈ ವೇಳೆ ಅಹ್ಲುವಾಲಿಯಾ ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಭ್ರಷ್ಟಾಚಾರದ ಗಂಭೀರ ಆರೋಪಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ತನ್ನ ಘನತೆ ಕಳೆದುಕೊಂಡಿರುವುದು ಮಾತ್ರವಲ್ಲದೆ ಅವರ ಚಾರಿತ್ರ್ಯಕ್ಕೂ ಕಳಂಕ ಉಂಟಾಗಿದ್ದು ಫಿರ್ಯಾದಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಹೇಳಿ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠ ಈ ಆದೇಶ ನೀಡಿದೆ.

ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರು ಸಲ್ಲಿಸಿದ್ದ ಮೊಕದ್ದಮೆಯನ್ನು ಪುರಸ್ಕರಿಸಿದ್ದ ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿ ನೀನಾ ಬನ್ಸಲ್ ಕೃಷ್ಣ ಅವರು, ಭಾರತೀಯ ಸೇನಾ ಅಧಿಕಾರಿಗೆ ಮಾನಹಾನಿ ಮಾಡಿದ್ದಕ್ಕಾಗಿ ತರುಣ್ ತೇಜ್‌ಪಾಲ್ ಮತ್ತು ಇಬ್ಬರು ಪತ್ರಕರ್ತರಾದ ಅನಿರುದ್ಧ್ ಬೆಹ್ಲ್ ಮತ್ತು ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು 2 ಕೋಟಿ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಆದೇಶಿಸಿದೆ.

ಈ ಮೊತ್ತವನ್ನು ಸುದ್ದಿ ಪೋರ್ಟಲ್ Tehelka.com, ಅದರ ಮಾಲೀಕ ಕಂಪನಿ M/s ಬಫಲೋ ಕಮ್ಯುನಿಕೇಷನ್ಸ್, ಅದರ ಮಾಲೀಕರಾದ ತರುಣ್ ತೇಜ್ಪಾಲ್ ಮತ್ತು ಅನಿರುದ್ಧ್ ಬೆಹ್ಲ್ ಮತ್ತು ಮ್ಯಾಥ್ಯೂ ಸ್ಯಾಮ್ಯುಯೆಲ್ ಪಾವತಿಸಬೇಕಿದೆ.

ಪ್ರಾಮಾಣಿಕ ಸೇನಾಧಿಕಾರಿಯ ಪ್ರತಿಷ್ಠೆಗೆ ಧಕ್ಕೆ ಉಂಡು ಮಾಡಿರುವ ಮತ್ತೊಂದು ದೊಡ್ಡ ಪ್ರಕರಣ ಇಲ್ಲ. ಇನ್ನು ಘಟನೆ ನಡೆದು 23 ವರ್ಷಗಳ ನಂತರ ಕ್ಷಮೆಯಾಚಿಸುವುದು ಅಸಮರ್ಪಕ ಮಾತ್ರವಲ್ಲದೆ ಅಸಂಬದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

2001ರಲ್ಲಿ ನ್ಯೂಸ್ ಪೋರ್ಟಲ್‌ನಿಂದ ಉದ್ದೇಶಿತ ಕುಟುಕು ಕಾರ್ಯಾಚರಣೆ ಬಿಡುಗಡೆ ಮಾಡಲಾಗಿತ್ತು. ಆದಾಗ್ಯೂ, ನ್ಯೂಸ್ ಪೋರ್ಟಲ್‌ನೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಪ್ರಶ್ನಾರ್ಹ ಸುದ್ದಿಯನ್ನು ಪ್ರಸಾರ ಮಾಡಿದ ಝೀ ಟೆಲಿಫಿಲ್ಮ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳ ಕಡೆಯಿಂದ ಫಿರ್ಯಾದುದಾರರು ಯಾವುದೇ ಮಾನನಷ್ಟ ಕೃತ್ಯವನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ನ್ಯೂಸ್ ಪೋರ್ಟಲ್  2001ರ ಮಾರ್ಚ್ 13ರಂದು ಹೊಸ ರಕ್ಷಣಾ ಸಾಧನಗಳ ಆಮದುಗೆ ಸಂಬಂಧಿಸಿದ ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರವನ್ನು ಆರೋಪಿಸುವ ಕುಟುಕು ಕಾರ್ಯಾಚರಣೆ ಕಾರ್ಯಕ್ರಮವನ್ನು ಪ್ರಕಟಿಸಿತು. ‘ಆಪರೇಷನ್ ವೆಸ್ಟ್ ಎಂಡ್’ ಸುದ್ದಿಯಲ್ಲಿ ತನಗೆ ಮಾನಹಾನಿ ಮಾಡಲಾಗಿದೆ ಎಂದು ವಕೀಲ ಚೇತನ್ ಆನಂದ್ ಮೂಲಕ ಫಿರ್ಯಾದಿ ಹೇಳಿಕೊಂಡಿದ್ದರು. ಅದನ್ನು ತಪ್ಪಾಗಿ ಪ್ರಸಾರ ಮಾಡಲಾಗಿದ್ದು, ಲಂಚ ಪಡೆದಿದ್ದಾರೆ ಎಂದು ವರದಿಯಾಗಿತ್ತು.

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

26 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

31 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

36 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

42 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago