BREAKING NEWS

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ಹೈಕೋರ್ಟ್ ಆದೇಶ

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

2001ರಲ್ಲಿ ತೆಹಲ್ಕಾ ಕುಟುಕು ಕಾರ್ಯಾಚರಣೆ ನಡೆದಿತ್ತು. ಈ ವೇಳೆ ಅಹ್ಲುವಾಲಿಯಾ ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಭ್ರಷ್ಟಾಚಾರದ ಗಂಭೀರ ಆರೋಪಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ತನ್ನ ಘನತೆ ಕಳೆದುಕೊಂಡಿರುವುದು ಮಾತ್ರವಲ್ಲದೆ ಅವರ ಚಾರಿತ್ರ್ಯಕ್ಕೂ ಕಳಂಕ ಉಂಟಾಗಿದ್ದು ಫಿರ್ಯಾದಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಹೇಳಿ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠ ಈ ಆದೇಶ ನೀಡಿದೆ.

ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರು ಸಲ್ಲಿಸಿದ್ದ ಮೊಕದ್ದಮೆಯನ್ನು ಪುರಸ್ಕರಿಸಿದ್ದ ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿ ನೀನಾ ಬನ್ಸಲ್ ಕೃಷ್ಣ ಅವರು, ಭಾರತೀಯ ಸೇನಾ ಅಧಿಕಾರಿಗೆ ಮಾನಹಾನಿ ಮಾಡಿದ್ದಕ್ಕಾಗಿ ತರುಣ್ ತೇಜ್‌ಪಾಲ್ ಮತ್ತು ಇಬ್ಬರು ಪತ್ರಕರ್ತರಾದ ಅನಿರುದ್ಧ್ ಬೆಹ್ಲ್ ಮತ್ತು ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು 2 ಕೋಟಿ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಆದೇಶಿಸಿದೆ.

ಈ ಮೊತ್ತವನ್ನು ಸುದ್ದಿ ಪೋರ್ಟಲ್ Tehelka.com, ಅದರ ಮಾಲೀಕ ಕಂಪನಿ M/s ಬಫಲೋ ಕಮ್ಯುನಿಕೇಷನ್ಸ್, ಅದರ ಮಾಲೀಕರಾದ ತರುಣ್ ತೇಜ್ಪಾಲ್ ಮತ್ತು ಅನಿರುದ್ಧ್ ಬೆಹ್ಲ್ ಮತ್ತು ಮ್ಯಾಥ್ಯೂ ಸ್ಯಾಮ್ಯುಯೆಲ್ ಪಾವತಿಸಬೇಕಿದೆ.

ಪ್ರಾಮಾಣಿಕ ಸೇನಾಧಿಕಾರಿಯ ಪ್ರತಿಷ್ಠೆಗೆ ಧಕ್ಕೆ ಉಂಡು ಮಾಡಿರುವ ಮತ್ತೊಂದು ದೊಡ್ಡ ಪ್ರಕರಣ ಇಲ್ಲ. ಇನ್ನು ಘಟನೆ ನಡೆದು 23 ವರ್ಷಗಳ ನಂತರ ಕ್ಷಮೆಯಾಚಿಸುವುದು ಅಸಮರ್ಪಕ ಮಾತ್ರವಲ್ಲದೆ ಅಸಂಬದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

2001ರಲ್ಲಿ ನ್ಯೂಸ್ ಪೋರ್ಟಲ್‌ನಿಂದ ಉದ್ದೇಶಿತ ಕುಟುಕು ಕಾರ್ಯಾಚರಣೆ ಬಿಡುಗಡೆ ಮಾಡಲಾಗಿತ್ತು. ಆದಾಗ್ಯೂ, ನ್ಯೂಸ್ ಪೋರ್ಟಲ್‌ನೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಪ್ರಶ್ನಾರ್ಹ ಸುದ್ದಿಯನ್ನು ಪ್ರಸಾರ ಮಾಡಿದ ಝೀ ಟೆಲಿಫಿಲ್ಮ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳ ಕಡೆಯಿಂದ ಫಿರ್ಯಾದುದಾರರು ಯಾವುದೇ ಮಾನನಷ್ಟ ಕೃತ್ಯವನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ನ್ಯೂಸ್ ಪೋರ್ಟಲ್  2001ರ ಮಾರ್ಚ್ 13ರಂದು ಹೊಸ ರಕ್ಷಣಾ ಸಾಧನಗಳ ಆಮದುಗೆ ಸಂಬಂಧಿಸಿದ ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರವನ್ನು ಆರೋಪಿಸುವ ಕುಟುಕು ಕಾರ್ಯಾಚರಣೆ ಕಾರ್ಯಕ್ರಮವನ್ನು ಪ್ರಕಟಿಸಿತು. ‘ಆಪರೇಷನ್ ವೆಸ್ಟ್ ಎಂಡ್’ ಸುದ್ದಿಯಲ್ಲಿ ತನಗೆ ಮಾನಹಾನಿ ಮಾಡಲಾಗಿದೆ ಎಂದು ವಕೀಲ ಚೇತನ್ ಆನಂದ್ ಮೂಲಕ ಫಿರ್ಯಾದಿ ಹೇಳಿಕೊಂಡಿದ್ದರು. ಅದನ್ನು ತಪ್ಪಾಗಿ ಪ್ರಸಾರ ಮಾಡಲಾಗಿದ್ದು, ಲಂಚ ಪಡೆದಿದ್ದಾರೆ ಎಂದು ವರದಿಯಾಗಿತ್ತು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

43 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

44 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

46 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

49 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

53 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

57 mins ago