BREAKING NEWS

2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ : ಸಭೆಯ ಮಾಹಿತಿ ರಿವೀಲ್‌ ಮಾಡಿದ ನೃಪೇಂದ್ರ ಮಿಶ್ರಾ

ನವದೆಹಲಿ : ನರೇಂದ್ರ ಮೋದಿಯವರಿಗೆ 2 ಸಾವಿರ ರೂ. ನೋಟುಗಳನ್ನು ಚಲಾವಣೆಗೆ ತರಲು ಇಷ್ಟವಿರಲಿಲ್ಲ ಎಂದು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.

2016ರ ನವೆಂಬರ್‌ 8 ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಬಳಿಕ 2 ಸಾವಿರ ರೂ. ನೋಟು ಬಿಡುಗಡೆ ಮಾಡಲು ಮೋದಿಯವರಿಗೆ ಇಷ್ಟವಿರಲಿಲ್ಲ. ಆದರೆ ನೋಟು ನಿಷೇಧ ಚರ್ಚೆಯಲ್ಲಿ ಅಧಿಕಾರಿಗಳ ಸಲಹೆಯನ್ನು ಒಪ್ಪಿದ ಬಳಿಕ ಹೊಸ ನೋಟು ಬಿಡುಗಡೆಗೆ ಸಹಮತ ಸೂಚಿಸಿದರು ಎಂದು ಮಾಧ್ಯಮವೊಂದಕ್ಕೆ ತಿಳಿಸಿದರು.

ಸಭೆಯಲ್ಲಿ ಏನಾಗಿತ್ತು? : ಹಣದ ತುರ್ತು ಅಗತ್ಯವನ್ನು ಪೂರೈಸಲು 2000 ರೂ ಮುಖಬೆಲೆಯ ನೋಟು ಬಿಡುಗಡೆಯ ಪ್ರಸ್ತಾಪವನ್ನು ಅಧಿಕಾರಿಗಳು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಮೋದಿ ಬಡವರು ಮತ್ತು ಮಧ್ಯಮ ವರ್ಗದ ಜನರು 2000 ರೂ. ಮುಖಬೆಲೆಯ ನೋಟುಗಳನ್ನು ಬಳಸುವುದಿಲ್ಲ. ಅವರು ಹೆಚ್ಚಾಗಿ 100 ರೂ. ಮತ್ತು 500 ರೂ. ನೋಟು ಬಳಸುತ್ತಾರೆ. ಹೀಗಾಗಿ ಬಡವರಿಗೆ ತೊಂದರೆಯಾಗುವ ನೋಟುಗಳ ಬಿಡುಗಡೆಗೆ ತಮ್ಮ ಆಕ್ಷೇಪ ಇದೆ ಎಂದಿದ್ದರು.
ಮೋದಿ ಆಕ್ಷೇಪಕ್ಕೆ ಆಪ್ತ ತಂಡ ಇದು ತಾತ್ಕಾಲಿಕ ಕ್ರಮ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟಿತು. ಹೀಗಾಗಿ ತಮ್ಮ ತಂಡದ ಸಲಹೆ ಅನ್ವಯ ತಂಡದ ನಾಯಕನಾಗಿ ಅವರು ಈ ನಿರ್ಧಾರ ಒಪ್ಪಿಕೊಂಡರು ಎಂದು ಮಿಶ್ರಾ ಹೇಳಿದ್ದಾರೆ.

ಹಿಂದೆ ನರೇಂದ್ರ ಮೋದಿಯವರ 70ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪತ್ರಿಕೆಗೆ ಲೇಖನ ಬರೆದಿದ್ದ ನೃಪೇಂದ್ರ ಮಿಶ್ರಾ ಅಪನಗದೀಕರಣ ಸಿದ್ಧತೆಯ ವೇಳೆ 1 ಸಾವಿರ ರೂ. ನೋಟು ನಿಷೇಧಿಸಿದ ಬಳಿಕ 2 ಸಾವಿರ ರೂ. ನೋಟು ಮುದ್ರಿಸಬೇಕೆಂಬ ಸಲಹೆ ಇಷ್ಟವಾಗಿರಲಿಲ್ಲ. ಆದರೆ ಹಣದ ಕೊರತೆ ನೀಗಿಸಲು ಅನಿವಾರ್ಯವಾಗಿ 2 ಸಾವಿರ ರೂ. ಮುದ್ರಿಸಬೇಕೆಂದು ಸಲಹೆ ನೀಡಿದ ಬಳಿಕ ಕೊನೆಗೆ ಮೋದಿ ಒಪ್ಪಿಕೊಂಡಿದ್ದರು ಎಂದು ಅವರು ಬರೆದಿದ್ದರು.

ಈ ವಿಚಾರದ ಬಗ್ಗೆ ಭಾರೀ ಟೀಕೆ ಕೇಳಿ ಬಂದಿದ್ದರೂ ಮೋದಿಯವರು ಅಧಿಕಾರಿಗಳನ್ನು ದೂಷಿಸದೇ ಸ್ವತಃ ತಾವೇ ಹೊಣೆಯನ್ನು ಹೊತ್ತುಕೊಂಡಿದ್ದರು. ಕೆಲವು ವಿಚಾರಗಳ ಬಗ್ಗೆ ಸಮ್ಮತಿ ಇರದಿದ್ದರೂ ಜೊತೆಗಾರರು ನೀಡಿದ ಸಲಹೆಯನ್ನು ಒಪ್ಪಿಕೊಳ್ಳುವ ಗುಣ ಮೋದಿಯವರಲ್ಲಿದೆ ಎಂದು ತಿಳಿಸಿದ್ದರು.

lokesh

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

40 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

5 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

7 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

7 hours ago