BREAKING NEWS

ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಅಂಕಗಳ ಆಂತರಿಕ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಥಮ ಹಾಗೂ ದ್ವೀತೀಯ ಪಿಯುಸಿಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿದ್ಯಾರ್ಥಿಗಳನ್ನು ಶೈಕ್ಷಣಿಕ ವರ್ಷಾರಂಭದಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಮತ್ತು ಪರೀಕ್ಷಾ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಆಂತರಿಕ ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.  ಭಾಷಾ ವಿಷಯಗಳು ಮತ್ತು ಕೋರ್ ಸಬ್ಜೆಕ್ಟ್‌ಗಳಿಗೆ ಈ ನಿಯಮ ಅನ್ವಯ ಆಗಲಿದೆ.

ಮಂಗಳವಾರ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇಲ್ಲಿಯವರೆಗೂ ವಿಜ್ಞಾನ, ಗಣಿತ, ರಸಾಯನಶಾಸ, ಭೌತಶಾಸ, ಜೀವಶಾಸ್ತ್ರ ಸೇರಿ ಇತರೆ 37 ವಿಷಯಗಳಿಗೆ 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ ಮತ್ತು 70 ಅಂಕಗಳಿಗೆ ಥಿಯೆರಿ ಪರೀಕ್ಷೆ ನಡೆಸಿ 100 ಅಂಕಗಳನ್ನು ಪರಿಗಣಿಸಲಾಗುತ್ತಿತ್ತು. ಪ್ರಾಯೋಗಿಕ ಪರೀಕ್ಷೆ ಇಲ್ಲದ ಕಲಾ ಮತ್ತು ವಾಣಿಜ್ಯ ವಿಭಾಗದ ವಿಷಯಗಳಿಗೆ 100 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಅದನ್ನು 2023-24ನೇ ಸಾಲಿನಿಂದ 20 ಆಂತರಿಕ ಮತ್ತು 80 ಥಿಯರಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಹೊಸ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳ ನಿರಂತರ ಕಲಿಕೆಯ ಆಧಾರದ ಮೇಲೆ 10 ಅಂಕಗಳನ್ನು ನೀಡಲಾಗುತ್ತದೆ ಮತ್ತು ಅವರ ಕಾರ್ಯಯೋಜನೆಯ ಆಧಾರದ ಮೇಲೆ 10 ಅಂಕಗಳನ್ನು ನೀಡಲಾಗುತ್ತದೆ. “ಇದು ವಿದ್ಯಾರ್ಥಿಗಳಿಗೆ ಸ್ವಲ್ಪ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಾಯೋಗಿಕ ವಿಷಯಗಳಲ್ಲಿ ಅವರ ಆಸಕ್ತಿಯು ಹೆಚ್ಚಾಗುತ್ತದೆ” ಎಂದು ಸಚಿವರು ಹೇಳಿದರು.

ಒಂದು ವೇಳೆ ವಿದ್ಯಾರ್ಥಿಯು ಕಿರು ಪರೀಕ್ಷೆ ಮತ್ತು ಮಧ್ಯವಾರ್ಷಿಕ ಪರೀಕ್ಷೆಗೆ ಗೈರು ಹಾಜರಾಗಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ 80 ಅಂಕಗಳಿಗೆ ಕನಿಷ್ಠ ಉತ್ತೀರ್ಣಗೊಳ್ಳಲು ಬೇಕಾದ 35 ಅಂಕಗಳನ್ನು ಪಡೆಯಬೇಕು. ಇದು ಕೇವಲ ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago