BREAKING NEWS

ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಅಂಕಗಳ ಆಂತರಿಕ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಥಮ ಹಾಗೂ ದ್ವೀತೀಯ ಪಿಯುಸಿಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿದ್ಯಾರ್ಥಿಗಳನ್ನು ಶೈಕ್ಷಣಿಕ ವರ್ಷಾರಂಭದಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಮತ್ತು ಪರೀಕ್ಷಾ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಆಂತರಿಕ ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.  ಭಾಷಾ ವಿಷಯಗಳು ಮತ್ತು ಕೋರ್ ಸಬ್ಜೆಕ್ಟ್‌ಗಳಿಗೆ ಈ ನಿಯಮ ಅನ್ವಯ ಆಗಲಿದೆ.

ಮಂಗಳವಾರ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇಲ್ಲಿಯವರೆಗೂ ವಿಜ್ಞಾನ, ಗಣಿತ, ರಸಾಯನಶಾಸ, ಭೌತಶಾಸ, ಜೀವಶಾಸ್ತ್ರ ಸೇರಿ ಇತರೆ 37 ವಿಷಯಗಳಿಗೆ 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ ಮತ್ತು 70 ಅಂಕಗಳಿಗೆ ಥಿಯೆರಿ ಪರೀಕ್ಷೆ ನಡೆಸಿ 100 ಅಂಕಗಳನ್ನು ಪರಿಗಣಿಸಲಾಗುತ್ತಿತ್ತು. ಪ್ರಾಯೋಗಿಕ ಪರೀಕ್ಷೆ ಇಲ್ಲದ ಕಲಾ ಮತ್ತು ವಾಣಿಜ್ಯ ವಿಭಾಗದ ವಿಷಯಗಳಿಗೆ 100 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಅದನ್ನು 2023-24ನೇ ಸಾಲಿನಿಂದ 20 ಆಂತರಿಕ ಮತ್ತು 80 ಥಿಯರಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಹೊಸ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳ ನಿರಂತರ ಕಲಿಕೆಯ ಆಧಾರದ ಮೇಲೆ 10 ಅಂಕಗಳನ್ನು ನೀಡಲಾಗುತ್ತದೆ ಮತ್ತು ಅವರ ಕಾರ್ಯಯೋಜನೆಯ ಆಧಾರದ ಮೇಲೆ 10 ಅಂಕಗಳನ್ನು ನೀಡಲಾಗುತ್ತದೆ. “ಇದು ವಿದ್ಯಾರ್ಥಿಗಳಿಗೆ ಸ್ವಲ್ಪ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಾಯೋಗಿಕ ವಿಷಯಗಳಲ್ಲಿ ಅವರ ಆಸಕ್ತಿಯು ಹೆಚ್ಚಾಗುತ್ತದೆ” ಎಂದು ಸಚಿವರು ಹೇಳಿದರು.

ಒಂದು ವೇಳೆ ವಿದ್ಯಾರ್ಥಿಯು ಕಿರು ಪರೀಕ್ಷೆ ಮತ್ತು ಮಧ್ಯವಾರ್ಷಿಕ ಪರೀಕ್ಷೆಗೆ ಗೈರು ಹಾಜರಾಗಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ 80 ಅಂಕಗಳಿಗೆ ಕನಿಷ್ಠ ಉತ್ತೀರ್ಣಗೊಳ್ಳಲು ಬೇಕಾದ 35 ಅಂಕಗಳನ್ನು ಪಡೆಯಬೇಕು. ಇದು ಕೇವಲ ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದರು.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago