BREAKING NEWS

ಕರ್ನಾಟಕದಲ್ಲಿಂದು 20 ಹೊಸ ಕೊವಿಡ್‌ ಪ್ರಕರಣ; ಇಬ್ಬರ ಸಾವು

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.

ಇನ್ನು ಇಂದು ತುಮಕೂರು ಹಾಗೂ ಚಿಕ್ಕಮಗಳೂರುಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಇಂದು ( ಡಿಸೆಂಬರ್‌ 20 ) ಒಟ್ಟು 20 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 20 ಹೊಸ ಪ್ರಕರಣಗಳು ವರದಿಯಾಗಿದ್ದರೆ, 5 ಜನ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92 ಇದ್ದು, ಕೊನೆಯ 24 ಗಂಟೆಗಳಲ್ಲಿ 808 ಟೆಸ್ಟ್‌ಗಳು ನಡೆದಿವೆ, 407 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 401 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.47% ಇದೆ. ಇನ್ನು ರಾಜ್ಯದಲ್ಲಿ ಈವರೆಗೆ ಇಬ್ಬರು ಕೊವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ.

ಒಟ್ಟು 92 ಸಕ್ರಿಯ ಪ್ರಕರಣಗಳ ಪೈಕಿ 72 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 20 ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 7 ಸೋಂಕಿತರು ಐಸಿಯುನಲ್ಲಿದ್ದು, 17 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

andolana

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

2 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

2 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

2 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

2 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

2 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

3 hours ago