BREAKING NEWS

ದ.ಕನ್ನಡ, ಉಡುಪಿಯಿಂದ ಅಮರನಾಥ ಯಾತ್ರೆ ತೆರಳಿದ್ದ 20 ಯಾತ್ರಾರ್ಥಿಗಳು ಸೇಫ್

ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ.

ಭೂಕುಸಿತದಿಂದ ಅಮರನಾಥ ಯಾತ್ರಿಗಳು ಪಾರಾದ ಬಗ್ಗೆ ವರದಿ ಬಂದ ಬೆನ್ನಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ ಯಾತ್ರೆಗೆ ತೆರಳಿದ 20 ಮಂದಿ ಯಾತ್ರಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಅತಿಯಾದ ಮಳೆಗೆ ಭೂಕುಸಿತ ಕಂಡು ಬಂದಿದ್ದು ಯಾತ್ರಾರ್ಥಿಗಳು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ ಮತ್ತು ಸದ್ಯ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ರಂಭಾನ್ ಎಂಬ ಸ್ಥಳದಲ್ಲಿ ಗುಡ್ಡ ಕುಸಿತ ಕಂಡ ಹಿನ್ನೆಲೆಯಲ್ಲಿ ಅಮರನಾಥ ದೇವಾಲಯಕ್ಕೆ ತೆರಳುವ ದಾರಿ ಸಂಪೂರ್ಣ ಸ್ಥಗಿತಗೊಂಡಿದೆ.

ಮಣ್ಣು ತೆರವು ಕಾರ್ಯ ನಡೆಯುತ್ತಿದೆಯಾದರೂ ಮತ್ತೆ ಭೂಕುಸಿತ ಕಂಡು ಬರುವ ಅವಕಾಶಗಳು ಇರುವ ಹಿನ್ನೆಲೆಯಲ್ಲಿ ಸದ್ಯ ಯಾತ್ರೆಯನ್ನು ಸ್ಥಗಿತ ಮಾಡಿದ್ದಾರೆ.

ಸದ್ಯ ಸಂತೋಷ್ ನರಿಕೊಂಬು ಅವರನ್ನೊಳಗೊಂಡ 20 ಜನ ಯಾತ್ರಾರ್ಥಿಗಳ ತಂಡ ಭೂಕುಸಿತ ಕಂಡ ಕಾರಣ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರ ಕ್ಕೂ ಹೋಗಲು ಸಾಧ್ಯವಾಗದೆ ಸಿ.ಆರ್.ಪಿ.ಎಫ್ ಕ್ಯಾಂಪ್ ನಲ್ಲಿ ಸುರಕ್ಷಿತವಾಗಿ ಇದ್ದಾರೆ.

ಜುಲೈ 4ರಂದು ಟ್ರೈನ್ ಮೂಲಕ ಇವರು ಯಾತ್ರೆ ಕೈಗೊಂಡಿದ್ದು, ಅಮರನಾಥ ಯಾತ್ರೆ ಬಳಿಕ ವೈಷ್ಣೋದೇವಿ ಯಾತ್ರೆ ಮಾಡಲಿದ್ದಾರೆ.

ದ.ಕ.ಜಿಲ್ಲೆ ಹಾಗೂ ಉಡುಪಿ ಯಿಂದ ತೆರಳಿದ ತಾಲೂಕಿನ ಯಾತ್ರಾರ್ಥಿಗಳು:  ನರಿಕೊಂಬುನಿಂದ ಒಟ್ಟು 5 ಮಂದಿ, ಮಂಗಳೂರು ಅಡ್ಯಾರನಿಂದ 8 ಯಾತ್ರಾರ್ಥಿಗಳು, ಪುತ್ತೂರಿನಿಂದ 1, ಉಡುಪಿಯಿಂದ 1 , ಮೂಡಬಿರೆಯಿಂದ 1 , ಸಜೀಪದಿಂದ 3, ಉಪ್ಪಿನಂಗಡಿ ಕರಾಯದಿಂದ 1 ಹೀಗೆ ಒಟ್ಟು 20 ಯಾತ್ರಾರ್ಥಿಗಳು ಯಾತ್ರೆಗೆ ತೆರಳಿದ್ದಾರೆ.

ಕಳೆದ ಬಾರಿ ಇದೇ ರೀತಿಯಲ್ಲಿ ಭೂಕುಸಿತ ಕಂಡ ಸಂದರ್ಭದಲ್ಲಿ ಇಲ್ಲಿನ ಯಾತ್ರಾರ್ಥಿಗಳು ಅಲ್ಲಿ ಸಿಲುಕಿಕೊಂಡಿದ್ದರು.ಅ ಸಂದರ್ಭದಲ್ಲಿ ಕೂಡ ಸುರಕ್ಷಿತವಾಗಿ ಯಾವುದೇ ಸಮಸ್ಯೆ ಗಳಿಲ್ಲದೆ ಹಿಂದುರಿಗಿದ್ದರು.

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

14 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

14 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago