BREAKING NEWS

ದ.ಕನ್ನಡ, ಉಡುಪಿಯಿಂದ ಅಮರನಾಥ ಯಾತ್ರೆ ತೆರಳಿದ್ದ 20 ಯಾತ್ರಾರ್ಥಿಗಳು ಸೇಫ್

ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ.

ಭೂಕುಸಿತದಿಂದ ಅಮರನಾಥ ಯಾತ್ರಿಗಳು ಪಾರಾದ ಬಗ್ಗೆ ವರದಿ ಬಂದ ಬೆನ್ನಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ ಯಾತ್ರೆಗೆ ತೆರಳಿದ 20 ಮಂದಿ ಯಾತ್ರಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಅತಿಯಾದ ಮಳೆಗೆ ಭೂಕುಸಿತ ಕಂಡು ಬಂದಿದ್ದು ಯಾತ್ರಾರ್ಥಿಗಳು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ ಮತ್ತು ಸದ್ಯ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ರಂಭಾನ್ ಎಂಬ ಸ್ಥಳದಲ್ಲಿ ಗುಡ್ಡ ಕುಸಿತ ಕಂಡ ಹಿನ್ನೆಲೆಯಲ್ಲಿ ಅಮರನಾಥ ದೇವಾಲಯಕ್ಕೆ ತೆರಳುವ ದಾರಿ ಸಂಪೂರ್ಣ ಸ್ಥಗಿತಗೊಂಡಿದೆ.

ಮಣ್ಣು ತೆರವು ಕಾರ್ಯ ನಡೆಯುತ್ತಿದೆಯಾದರೂ ಮತ್ತೆ ಭೂಕುಸಿತ ಕಂಡು ಬರುವ ಅವಕಾಶಗಳು ಇರುವ ಹಿನ್ನೆಲೆಯಲ್ಲಿ ಸದ್ಯ ಯಾತ್ರೆಯನ್ನು ಸ್ಥಗಿತ ಮಾಡಿದ್ದಾರೆ.

ಸದ್ಯ ಸಂತೋಷ್ ನರಿಕೊಂಬು ಅವರನ್ನೊಳಗೊಂಡ 20 ಜನ ಯಾತ್ರಾರ್ಥಿಗಳ ತಂಡ ಭೂಕುಸಿತ ಕಂಡ ಕಾರಣ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರ ಕ್ಕೂ ಹೋಗಲು ಸಾಧ್ಯವಾಗದೆ ಸಿ.ಆರ್.ಪಿ.ಎಫ್ ಕ್ಯಾಂಪ್ ನಲ್ಲಿ ಸುರಕ್ಷಿತವಾಗಿ ಇದ್ದಾರೆ.

ಜುಲೈ 4ರಂದು ಟ್ರೈನ್ ಮೂಲಕ ಇವರು ಯಾತ್ರೆ ಕೈಗೊಂಡಿದ್ದು, ಅಮರನಾಥ ಯಾತ್ರೆ ಬಳಿಕ ವೈಷ್ಣೋದೇವಿ ಯಾತ್ರೆ ಮಾಡಲಿದ್ದಾರೆ.

ದ.ಕ.ಜಿಲ್ಲೆ ಹಾಗೂ ಉಡುಪಿ ಯಿಂದ ತೆರಳಿದ ತಾಲೂಕಿನ ಯಾತ್ರಾರ್ಥಿಗಳು:  ನರಿಕೊಂಬುನಿಂದ ಒಟ್ಟು 5 ಮಂದಿ, ಮಂಗಳೂರು ಅಡ್ಯಾರನಿಂದ 8 ಯಾತ್ರಾರ್ಥಿಗಳು, ಪುತ್ತೂರಿನಿಂದ 1, ಉಡುಪಿಯಿಂದ 1 , ಮೂಡಬಿರೆಯಿಂದ 1 , ಸಜೀಪದಿಂದ 3, ಉಪ್ಪಿನಂಗಡಿ ಕರಾಯದಿಂದ 1 ಹೀಗೆ ಒಟ್ಟು 20 ಯಾತ್ರಾರ್ಥಿಗಳು ಯಾತ್ರೆಗೆ ತೆರಳಿದ್ದಾರೆ.

ಕಳೆದ ಬಾರಿ ಇದೇ ರೀತಿಯಲ್ಲಿ ಭೂಕುಸಿತ ಕಂಡ ಸಂದರ್ಭದಲ್ಲಿ ಇಲ್ಲಿನ ಯಾತ್ರಾರ್ಥಿಗಳು ಅಲ್ಲಿ ಸಿಲುಕಿಕೊಂಡಿದ್ದರು.ಅ ಸಂದರ್ಭದಲ್ಲಿ ಕೂಡ ಸುರಕ್ಷಿತವಾಗಿ ಯಾವುದೇ ಸಮಸ್ಯೆ ಗಳಿಲ್ಲದೆ ಹಿಂದುರಿಗಿದ್ದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago