ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ.
ಭೂಕುಸಿತದಿಂದ ಅಮರನಾಥ ಯಾತ್ರಿಗಳು ಪಾರಾದ ಬಗ್ಗೆ ವರದಿ ಬಂದ ಬೆನ್ನಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ ಯಾತ್ರೆಗೆ ತೆರಳಿದ 20 ಮಂದಿ ಯಾತ್ರಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.
ಅತಿಯಾದ ಮಳೆಗೆ ಭೂಕುಸಿತ ಕಂಡು ಬಂದಿದ್ದು ಯಾತ್ರಾರ್ಥಿಗಳು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ ಮತ್ತು ಸದ್ಯ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ರಂಭಾನ್ ಎಂಬ ಸ್ಥಳದಲ್ಲಿ ಗುಡ್ಡ ಕುಸಿತ ಕಂಡ ಹಿನ್ನೆಲೆಯಲ್ಲಿ ಅಮರನಾಥ ದೇವಾಲಯಕ್ಕೆ ತೆರಳುವ ದಾರಿ ಸಂಪೂರ್ಣ ಸ್ಥಗಿತಗೊಂಡಿದೆ.
ಮಣ್ಣು ತೆರವು ಕಾರ್ಯ ನಡೆಯುತ್ತಿದೆಯಾದರೂ ಮತ್ತೆ ಭೂಕುಸಿತ ಕಂಡು ಬರುವ ಅವಕಾಶಗಳು ಇರುವ ಹಿನ್ನೆಲೆಯಲ್ಲಿ ಸದ್ಯ ಯಾತ್ರೆಯನ್ನು ಸ್ಥಗಿತ ಮಾಡಿದ್ದಾರೆ.
ಸದ್ಯ ಸಂತೋಷ್ ನರಿಕೊಂಬು ಅವರನ್ನೊಳಗೊಂಡ 20 ಜನ ಯಾತ್ರಾರ್ಥಿಗಳ ತಂಡ ಭೂಕುಸಿತ ಕಂಡ ಕಾರಣ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರ ಕ್ಕೂ ಹೋಗಲು ಸಾಧ್ಯವಾಗದೆ ಸಿ.ಆರ್.ಪಿ.ಎಫ್ ಕ್ಯಾಂಪ್ ನಲ್ಲಿ ಸುರಕ್ಷಿತವಾಗಿ ಇದ್ದಾರೆ.
ಜುಲೈ 4ರಂದು ಟ್ರೈನ್ ಮೂಲಕ ಇವರು ಯಾತ್ರೆ ಕೈಗೊಂಡಿದ್ದು, ಅಮರನಾಥ ಯಾತ್ರೆ ಬಳಿಕ ವೈಷ್ಣೋದೇವಿ ಯಾತ್ರೆ ಮಾಡಲಿದ್ದಾರೆ.
ದ.ಕ.ಜಿಲ್ಲೆ ಹಾಗೂ ಉಡುಪಿ ಯಿಂದ ತೆರಳಿದ ತಾಲೂಕಿನ ಯಾತ್ರಾರ್ಥಿಗಳು: ನರಿಕೊಂಬುನಿಂದ ಒಟ್ಟು 5 ಮಂದಿ, ಮಂಗಳೂರು ಅಡ್ಯಾರನಿಂದ 8 ಯಾತ್ರಾರ್ಥಿಗಳು, ಪುತ್ತೂರಿನಿಂದ 1, ಉಡುಪಿಯಿಂದ 1 , ಮೂಡಬಿರೆಯಿಂದ 1 , ಸಜೀಪದಿಂದ 3, ಉಪ್ಪಿನಂಗಡಿ ಕರಾಯದಿಂದ 1 ಹೀಗೆ ಒಟ್ಟು 20 ಯಾತ್ರಾರ್ಥಿಗಳು ಯಾತ್ರೆಗೆ ತೆರಳಿದ್ದಾರೆ.
ಕಳೆದ ಬಾರಿ ಇದೇ ರೀತಿಯಲ್ಲಿ ಭೂಕುಸಿತ ಕಂಡ ಸಂದರ್ಭದಲ್ಲಿ ಇಲ್ಲಿನ ಯಾತ್ರಾರ್ಥಿಗಳು ಅಲ್ಲಿ ಸಿಲುಕಿಕೊಂಡಿದ್ದರು.ಅ ಸಂದರ್ಭದಲ್ಲಿ ಕೂಡ ಸುರಕ್ಷಿತವಾಗಿ ಯಾವುದೇ ಸಮಸ್ಯೆ ಗಳಿಲ್ಲದೆ ಹಿಂದುರಿಗಿದ್ದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…