BREAKING NEWS

200 ಯೂನಿಟ್ ಉಚಿತ ವಿದ್ಯುತ್ ಯೋಜನೆ ‘ಗೃಹ ಜ್ಯೋತಿ’ಗೆ ಚಾಲನೆ

ಕಲಬುರ್ಗಿ : ಪಂಚಖಾತ್ರಿಗಳಲ್ಲಿ ಅತ್ಯಂತ ಮಹತ್ವರವಾಗಿರುವ ಗೃಹಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಧಿಕೃತವಾದ ಚಾಲನೆ ನೀಡಿದರು.

ಕಲಬುರ್ಗಿಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಪೌರಾಡಳಿತ ಸಚಿವ ರಹೀಂಖಾನ್ ಸೇರಿದಂತೆ ಸಂಪುಟದ ಬಹಳಷು ಸಚಿವರು ಭಾಗವಹಿಸಿದ್ದರು.

ಜುಲೈ 1 ರಿಂದ ಬಳಕೆ ಮಾಡಿರುವ 200 ಯುನಿಟ್ ಒಳಗಿನ ವಿದ್ಯುತ್‍ಗೆ ಶುಲ್ಕ ವಿನಾಯಿತಿ ನೀಡುವ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಈಗಾಗಲೇ ಜಾರಿಯಲ್ಲಿದೆ. ಆ.1 ರಿಂದ ನೀಡಲಾಗುತ್ತಿರುವ ವಿದ್ಯುತ್ ಬಿಲ್‍ಗಳಲ್ಲಿ ಶೂನ್ಯ ಶುಲ್ಕ ನಮೂದಾಗುತ್ತಿದ್ದು, ಸಾರ್ವಜನಿಕರು ಖುಷಿಯಾಗಿದ್ದಾರೆ.

ರಾಜ್ಯದಲ್ಲಿರುವ 2.16 ಕೋಟಿ ಆರಾರ್ ಸಂಖ್ಯೆಗಳಿದ್ದು, ಅದರಲ್ಲಿ 2.14 ಕೋಟಿ ಸಂಪರ್ಕಗಳು ಗೃಹಜ್ಯೋತಿಗೆ ಅರ್ಹತೆ ಪಡೆದಿದ್ದವು. ನೋಂದಾವಣಿ ಆಧಾರದ ಮೇಲೆ ಸೌಲಭ್ಯ ದೊರೆಯುತ್ತಿದ್ದು, ಈವರೆಗೂ 1.43 ಕೋಟಿ ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಪರಿಶೀಲನೆ ಬಳಿಕ ಅಷ್ಟೂ ಗ್ರಾಹಕರು ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ಇಂಧನ ಇಲಾಖೆ ಘೋಷಿಸಿದೆ.

ಆಗಸ್ಟ್‌ ನಲ್ಲಿ ಈ ಗ್ರಾಹಕರಿಗೆ ನೀಡಲಾಗಿರುವ ಬಿಲ್‍ಗಳಿಗೆ ಯಾವುದೇ ಶುಲ್ಕ ಸಂಗ್ರಹಿಸುತ್ತಿಲ್ಲ. ಬದಲಾಗಿ ರಾಜ್ಯಸರ್ಕಾರ ವಿದ್ಯುತ್ ಶುಲ್ಕದ ಬಾಬ್ತನ್ನು ಎಸ್ಕಾಂಗಳಿಗೆ ಸಬ್ಸಿಡಿ ರೂಪದಲ್ಲಿ ಪಾವತಿ ಮಾಡಲಿದೆ.

ಚುನಾವಣೆಯ ಮೊದಲು ಕಾಂಗ್ರೆಸ್ ಪಕ್ಷ ಪಂಚಖಾತ್ರಿ ಯೋಜನೆಗಳನ್ನು ಘೋಷಿಸಿತ್ತು. ಅದರಲ್ಲಿ ಜೂನ್ 11 ರಿಂದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಗೆ ಬಂದಿದೆ. ಸುಮಾರು 12 ಸಾವಿರ ಕೋಟಿ ರೂ. ಮೊತ್ತದ ಗೃಹಜ್ಯೋತಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ.

ಬಿಪಿಎಲ್ ಪಡಿತರ ಚೀಟಿದಾರರಿಗೆ 10 ಕೆ.ಜಿ. ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜುಲೈ 1 ರಿಂದಲೇ ಅನುಷ್ಠಾನಗೊಳ್ಳುತ್ತಿದೆ. ಸದ್ಯಕ್ಕೆ ಅಕ್ಕಿ ದೊರೆಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪಾಲಿನ 5 ಕೆ.ಜಿ.ಗೆ 170 ರೂ. ನಂತೆ 1 ಕೋಟಿ ಕಾರ್ಡುದಾರರಿಗೆ ಕಳೆದ ತಿಂಗಳು 556 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ. ಈ ತಿಂಗಳಿನಲ್ಲಿ ಹೊಸ ಕಾರ್ಡುಗಳ ನೋಂದಣಿಗೆ ಅವಕಾಶ ನೀಡಲಾಗುತ್ತಿದ್ದು, ಮತ್ತಷ್ಟು ಫಲಾನುಭವಿಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ.

ಬಹುಷಃ ಆಗಸ್ಟ್ ತಿಂಗಳಿನಲ್ಲೂ ಫಲಾನುಭವಿಗಳಿಗೆ ನಗದು ರೂಪದಲ್ಲೇ ಹಣ ಪಾವತಿಯಾಗುವ ಸಾಧ್ಯತೆಯಿದ್ದು, ಬಳಿಕ ಸೆಪ್ಟೆಂಬರ್‌ನಿಂದ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಅತೀ ಹೆಚ್ಚು ಅನುದಾನ ಬಯಸುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಇದೇ ತಿಂಗಳ 16 ಅಥವಾ 17 ರಂದು ಅರ್ಹ ಫಲಾನುಭವಿಗಳ ಖಾತೆಗಳಿಗೆ ತಲಾ 2 ಸಾವಿರ ರೂ. ಜಮಾ ಮಾಡಲಾಗುತ್ತದೆ.

ಯುವನಿ ಯೋಜನೆಗೆ ಡಿಸೆಂಬರ್ ಬಳಿಕ ಅರ್ಜಿ ಆಹ್ವಾನ ಮಾಡುವ ಸಾಧ್ಯತೆಗಳಿವೆ. ಒಂದು ಹಂತದಲ್ಲಿ ಬಿಜೆಪಿ ಪಂಚಖಾತ್ರಿ ಯೋಜನೆಗಳಿಗೆ ಷರತ್ತುಗಳಿಲ್ಲದೆ ಅನುಷ್ಠಾನಗೊಳಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿತ್ತು.ಎಲ್ಲಾ ಯೋಜನೆಗಳು ಹಂತ ಹಂತವಾಗಿ ಜಾರಿಯಾಗುತ್ತಿದ್ದು, ಜನರಿಗೆ ತಲುಪಲಾರಂಭಿಸಿದ ಬಳಿಕ ಅವೈಜ್ಞಾನಿಕ ಪಂಚಖಾತ್ರಿ ಯೋಜನೆಗಳ ಜಾರಿಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಲಿದೆ ಟೀಕೆ ಮಾಡಲಾರಂಭಿಸಿದೆ.

ಕಲಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಟೀಕೆಗೆ ಎದುರೇಟು ನೀಡಿದ್ದು, ಕಾಂಗ್ರೆಸ್ ಬಡವರಿಗೆ ಯೋಜನೆಗಳನ್ನು ರೂಪಿಸುತ್ತಿದೆ. ಬಿಜೆಪಿ ಶ್ರೀಮಂತರ ಪರವಾಗಿದೆ ಎಂಬ ವಾಗ್ದಾಳಿ ನಡೆಸಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗವನ್ನು ಆದ್ಯತೆಯಾಗಿಟ್ಟುಕೊಂಡು ಗೃಹಜ್ಯೋತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರ್ಕಾರಿ ಕಾರ್ಯಕ್ರಮವಾದರೂ ಬಹುತೇಕ ಪಕ್ಷದ ಪ್ರಚಾರದ ವೇದಿಕೆಯನ್ನಾಗಿ ಪರಿವರ್ತಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಮುಖ ಅತಿಥಿಗಳು ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದೇ ಹೆಚ್ಚಾಗಿ ಕಂಡುಬಂದಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago