BREAKING NEWS

ಟಾಟಾ ಟೆಕ್ನಾಲಜೀಸ್‌ನಿಂದ ರಾಜ್ಯದಲ್ಲಿ 2000 ಕೋಟಿ ಹೂಡಿಕೆ: ಎಂ.ಬಿ. ಪಾಟೀಲ್

ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್‌ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ.

ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.

https://twitter.com/MBPatil/status/1679094417779564544?s=20

ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್ಎಂಇ)ಗಳನ್ನು ಗಮನದಲ್ಲಿರಿಸಿಕೊಂಡು ಈ ಘಟಕಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶವಾಗಿದೆ. ಸರ್ಕಾರ‌ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಇದನ್ನು ಸ್ಥಾಪಿಸುವ ಯೋಜನೆಯಿದ್ದು, ಟಾಟಾ ಟೆಕ್ನಾಲಜೀಸ್ ಶೇ. 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇ. 30ರಷ್ಟು ಇರಲಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಎಂಎಸ್ಎಂಇಗಳಿಗಾಗಿ ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್ ಸ್ಥಾಪನೆ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ. ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂ. ವೆಚ್ಚವಾಗಲಿದೆ.

ಈ ಕೇಂದ್ರಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ಅಡ್ವಾನ್ಸ್ ಮ್ಯಾನಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗಲಿದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್‌ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್‌ ವಿವರಿಸಿದರು.

ಈ ಪ್ರಸ್ತಾವ‌ ಸ್ವಾಗತಾರ್ಹ ಎಂದ ಸಚಿವರು

ಸರ್ಕಾರವೂ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು ಐದು ಎಕರೆಯಷ್ಟು ಜಾಗ ಬೇಕಾಗಲಿದ್ದು, ಇದನ್ನು ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

8 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago