BREAKING NEWS

2023-24 ನೇ ಸಾಲಿನ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕರ ಪ್ರಶಸ್ತಿ’ ಪ್ರಕಟ

ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಶನಿವಾರ ಪ್ರಕಟಗೊಂಡಿದೆ.

ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ಮುಂದುವರಿದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ದಿನಾಂಕ: 15.09.2023 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಸಹ ಶಿಕ್ಷಕರು/ವಿಶೇಷ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

 

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

54 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago