BREAKING NEWS

24 ಶಾಸಕರಿಗೆ ಒಲಿದ ಮಂತ್ರಿಗಿರಿ ಭಾಗ್ಯ : ಇಂದು ರಾಜಭವನದಲ್ಲಿ ಪ್ರಮಾಣವಚನ

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ.

ಈ 24 ಮಂದಿ ಇಂದು ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ.

ಸಾಮಾನ್ಯವಾಗಿ ಒಂದು ಅಥವಾ ಎರಡು ಸಚಿವ ಸ್ಥಾನಗಳನ್ನು ಖಾಲಿ ಉಳಿಸಿ ಕೊಳ್ಳುವ ಸಂಪ್ರದಾಯಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಕಾರಣಕ್ಕೆ ತಿಲಾಂಜಲಿ ನೀಡಲಾಗಿದೆ.ಜಾತಿ, ಪ್ರದೇಶ, ಹಿರಿತನ ಒಳಗೊಂಡು ನಾನಾ ಮಾನದಂಡಗಳಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಪಟ್ಟಿ ಹಿಡಿದುಕೊಂಡು ಬುಧವಾರ ಸಂಜೆ ದೆಹಲಿಗೆ ಹಾರಿದ್ದರು. ಇನ್ನು ದೆಹಲಿಗೆ ಬಂದಿದ್ದ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್‌ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದರು. ಗುರುವಾರ ಮತ್ತೆ ವೇಣುಗೋಪಾಲ್‌ ನಿವಾಸದಲ್ಲಿ 2ನೇ ಸುತ್ತಿನ ಸಭೆ ನಡೆಯಿತು.

ಈ ಬಳಿಕ ನಿನ್ನೆ ಮೇ. 27 ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವಿನ ಚರ್ಚೆ ಬಳಿಕ 24 ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಇನ್ನು ಸಚಿವರ ಯಾದಿ ಕಸರತ್ತು ಪೂರ್ಣಗೊಂಡ ಬಳಿಕ ರಾಜ್ಯಪಾಲರ ಲಭ್ಯತೆಯ ಬಗ್ಗೆ ಸರಕಾರ ಮಾಹಿತಿ ಕೇಳಿ ಪಡೆದುಕೊಂಡಿದೆ. ಭಾನುವಾರ ನೂತನ ಪಾರ್ಲಿಮೆಂಟ್‌ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಒಪ್ಪಿಗೆ ಸೂಚಿಸಿದ್ದಾರೆ.

ನೂತನ ಸಚಿವರ ಪಟ್ಟಿ

ಹೆಚ್.ಕೆ.ಪಾಟೀಲ್​​​​

ಕೃಷ್ಣಭೈರೇಗೌಡ

ಚಲುವರಾಯಸ್ವಾಮಿ

ಪಿರಿಯಾಪಟ್ಟಣ ವೆಂಕಟೇಶ್​

ಡಾ.ಹೆಚ್.ಸಿ.ಮಹದೇವಪ್ಪ

ಈಶ್ವರ ಖಂಡ್ರೆ

ಕೆ.ಎನ್.ರಾಜಣ್ಣ

ದಿನೇಶ್ ಗುಂಡೂರಾವ್​​

ಶರಣಬಸಪ್ಪ ದರ್ಶನಾಪುರ

ಶಿವಾನಂದ ಪಾಟೀಲ್

ಆರ್.ಬಿ.ತಿಮ್ಮಾಪುರ

ಎಸ್.ಎಸ್.ಮಲ್ಲಿಕಾರ್ಜುನ

ಶಿವರಾಜ ತಂಗಡಗಿ

ಡಾ.ಶರಣ ಪ್ರಕಾಶ್ ಪಾಟೀಲ್

ಮಂಕಾಳು ವೈದ್ಯ

ಲಕ್ಷ್ಮೀ ಹೆಬ್ಬಾಳ್ಕರ್​

ರಹೀಂ ಖಾನ್

ಡಿ.ಸುಧಾಕರ್

ಸಂತೋಷ್ ಲಾಡ್​

ಬೋಸರಾಜು

ಬಿ.ಎಸ್.ಸುರೇಶ್

ಮಧು ಬಂಗಾರಪ್ಪ

ಎಂ.ಸಿ.ಸುಧಾಕರ್

ಬಿ.ನಾಗೇಂದ್ರ

lokesh

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

4 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

4 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

6 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

6 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

6 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

6 hours ago