ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ.
ಈ 24 ಮಂದಿ ಇಂದು ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ.
ಸಾಮಾನ್ಯವಾಗಿ ಒಂದು ಅಥವಾ ಎರಡು ಸಚಿವ ಸ್ಥಾನಗಳನ್ನು ಖಾಲಿ ಉಳಿಸಿ ಕೊಳ್ಳುವ ಸಂಪ್ರದಾಯಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಕಾರಣಕ್ಕೆ ತಿಲಾಂಜಲಿ ನೀಡಲಾಗಿದೆ.ಜಾತಿ, ಪ್ರದೇಶ, ಹಿರಿತನ ಒಳಗೊಂಡು ನಾನಾ ಮಾನದಂಡಗಳಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯೇಕ ಪಟ್ಟಿ ಹಿಡಿದುಕೊಂಡು ಬುಧವಾರ ಸಂಜೆ ದೆಹಲಿಗೆ ಹಾರಿದ್ದರು. ಇನ್ನು ದೆಹಲಿಗೆ ಬಂದಿದ್ದ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದರು. ಗುರುವಾರ ಮತ್ತೆ ವೇಣುಗೋಪಾಲ್ ನಿವಾಸದಲ್ಲಿ 2ನೇ ಸುತ್ತಿನ ಸಭೆ ನಡೆಯಿತು.
ಈ ಬಳಿಕ ನಿನ್ನೆ ಮೇ. 27 ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಚರ್ಚೆ ಬಳಿಕ 24 ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.
ಇನ್ನು ಸಚಿವರ ಯಾದಿ ಕಸರತ್ತು ಪೂರ್ಣಗೊಂಡ ಬಳಿಕ ರಾಜ್ಯಪಾಲರ ಲಭ್ಯತೆಯ ಬಗ್ಗೆ ಸರಕಾರ ಮಾಹಿತಿ ಕೇಳಿ ಪಡೆದುಕೊಂಡಿದೆ. ಭಾನುವಾರ ನೂತನ ಪಾರ್ಲಿಮೆಂಟ್ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ.
ನೂತನ ಸಚಿವರ ಪಟ್ಟಿ
ಹೆಚ್.ಕೆ.ಪಾಟೀಲ್
ಕೃಷ್ಣಭೈರೇಗೌಡ
ಚಲುವರಾಯಸ್ವಾಮಿ
ಪಿರಿಯಾಪಟ್ಟಣ ವೆಂಕಟೇಶ್
ಡಾ.ಹೆಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ಶರಣಬಸಪ್ಪ ದರ್ಶನಾಪುರ
ಶಿವಾನಂದ ಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ
ಶಿವರಾಜ ತಂಗಡಗಿ
ಡಾ.ಶರಣ ಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ
ಲಕ್ಷ್ಮೀ ಹೆಬ್ಬಾಳ್ಕರ್
ರಹೀಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ಬಿ.ನಾಗೇಂದ್ರ
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…