BREAKING NEWS

24 ಶಾಸಕರಿಗೆ ಒಲಿದ ಮಂತ್ರಿಗಿರಿ ಭಾಗ್ಯ : ಇಂದು ರಾಜಭವನದಲ್ಲಿ ಪ್ರಮಾಣವಚನ

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ.

ಈ 24 ಮಂದಿ ಇಂದು ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ.

ಸಾಮಾನ್ಯವಾಗಿ ಒಂದು ಅಥವಾ ಎರಡು ಸಚಿವ ಸ್ಥಾನಗಳನ್ನು ಖಾಲಿ ಉಳಿಸಿ ಕೊಳ್ಳುವ ಸಂಪ್ರದಾಯಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಕಾರಣಕ್ಕೆ ತಿಲಾಂಜಲಿ ನೀಡಲಾಗಿದೆ.ಜಾತಿ, ಪ್ರದೇಶ, ಹಿರಿತನ ಒಳಗೊಂಡು ನಾನಾ ಮಾನದಂಡಗಳಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಪಟ್ಟಿ ಹಿಡಿದುಕೊಂಡು ಬುಧವಾರ ಸಂಜೆ ದೆಹಲಿಗೆ ಹಾರಿದ್ದರು. ಇನ್ನು ದೆಹಲಿಗೆ ಬಂದಿದ್ದ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್‌ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದರು. ಗುರುವಾರ ಮತ್ತೆ ವೇಣುಗೋಪಾಲ್‌ ನಿವಾಸದಲ್ಲಿ 2ನೇ ಸುತ್ತಿನ ಸಭೆ ನಡೆಯಿತು.

ಈ ಬಳಿಕ ನಿನ್ನೆ ಮೇ. 27 ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವಿನ ಚರ್ಚೆ ಬಳಿಕ 24 ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಇನ್ನು ಸಚಿವರ ಯಾದಿ ಕಸರತ್ತು ಪೂರ್ಣಗೊಂಡ ಬಳಿಕ ರಾಜ್ಯಪಾಲರ ಲಭ್ಯತೆಯ ಬಗ್ಗೆ ಸರಕಾರ ಮಾಹಿತಿ ಕೇಳಿ ಪಡೆದುಕೊಂಡಿದೆ. ಭಾನುವಾರ ನೂತನ ಪಾರ್ಲಿಮೆಂಟ್‌ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಒಪ್ಪಿಗೆ ಸೂಚಿಸಿದ್ದಾರೆ.

ನೂತನ ಸಚಿವರ ಪಟ್ಟಿ

ಹೆಚ್.ಕೆ.ಪಾಟೀಲ್​​​​

ಕೃಷ್ಣಭೈರೇಗೌಡ

ಚಲುವರಾಯಸ್ವಾಮಿ

ಪಿರಿಯಾಪಟ್ಟಣ ವೆಂಕಟೇಶ್​

ಡಾ.ಹೆಚ್.ಸಿ.ಮಹದೇವಪ್ಪ

ಈಶ್ವರ ಖಂಡ್ರೆ

ಕೆ.ಎನ್.ರಾಜಣ್ಣ

ದಿನೇಶ್ ಗುಂಡೂರಾವ್​​

ಶರಣಬಸಪ್ಪ ದರ್ಶನಾಪುರ

ಶಿವಾನಂದ ಪಾಟೀಲ್

ಆರ್.ಬಿ.ತಿಮ್ಮಾಪುರ

ಎಸ್.ಎಸ್.ಮಲ್ಲಿಕಾರ್ಜುನ

ಶಿವರಾಜ ತಂಗಡಗಿ

ಡಾ.ಶರಣ ಪ್ರಕಾಶ್ ಪಾಟೀಲ್

ಮಂಕಾಳು ವೈದ್ಯ

ಲಕ್ಷ್ಮೀ ಹೆಬ್ಬಾಳ್ಕರ್​

ರಹೀಂ ಖಾನ್

ಡಿ.ಸುಧಾಕರ್

ಸಂತೋಷ್ ಲಾಡ್​

ಬೋಸರಾಜು

ಬಿ.ಎಸ್.ಸುರೇಶ್

ಮಧು ಬಂಗಾರಪ್ಪ

ಎಂ.ಸಿ.ಸುಧಾಕರ್

ಬಿ.ನಾಗೇಂದ್ರ

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago