BREAKING NEWS

24 ಶಾಸಕರಿಗೆ ಒಲಿದ ಮಂತ್ರಿಗಿರಿ ಭಾಗ್ಯ : ಇಂದು ರಾಜಭವನದಲ್ಲಿ ಪ್ರಮಾಣವಚನ

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ.

ಈ 24 ಮಂದಿ ಇಂದು ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ.

ಸಾಮಾನ್ಯವಾಗಿ ಒಂದು ಅಥವಾ ಎರಡು ಸಚಿವ ಸ್ಥಾನಗಳನ್ನು ಖಾಲಿ ಉಳಿಸಿ ಕೊಳ್ಳುವ ಸಂಪ್ರದಾಯಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಕಾರಣಕ್ಕೆ ತಿಲಾಂಜಲಿ ನೀಡಲಾಗಿದೆ.ಜಾತಿ, ಪ್ರದೇಶ, ಹಿರಿತನ ಒಳಗೊಂಡು ನಾನಾ ಮಾನದಂಡಗಳಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಪಟ್ಟಿ ಹಿಡಿದುಕೊಂಡು ಬುಧವಾರ ಸಂಜೆ ದೆಹಲಿಗೆ ಹಾರಿದ್ದರು. ಇನ್ನು ದೆಹಲಿಗೆ ಬಂದಿದ್ದ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್‌ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದರು. ಗುರುವಾರ ಮತ್ತೆ ವೇಣುಗೋಪಾಲ್‌ ನಿವಾಸದಲ್ಲಿ 2ನೇ ಸುತ್ತಿನ ಸಭೆ ನಡೆಯಿತು.

ಈ ಬಳಿಕ ನಿನ್ನೆ ಮೇ. 27 ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವಿನ ಚರ್ಚೆ ಬಳಿಕ 24 ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಇನ್ನು ಸಚಿವರ ಯಾದಿ ಕಸರತ್ತು ಪೂರ್ಣಗೊಂಡ ಬಳಿಕ ರಾಜ್ಯಪಾಲರ ಲಭ್ಯತೆಯ ಬಗ್ಗೆ ಸರಕಾರ ಮಾಹಿತಿ ಕೇಳಿ ಪಡೆದುಕೊಂಡಿದೆ. ಭಾನುವಾರ ನೂತನ ಪಾರ್ಲಿಮೆಂಟ್‌ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಒಪ್ಪಿಗೆ ಸೂಚಿಸಿದ್ದಾರೆ.

ನೂತನ ಸಚಿವರ ಪಟ್ಟಿ

ಹೆಚ್.ಕೆ.ಪಾಟೀಲ್​​​​

ಕೃಷ್ಣಭೈರೇಗೌಡ

ಚಲುವರಾಯಸ್ವಾಮಿ

ಪಿರಿಯಾಪಟ್ಟಣ ವೆಂಕಟೇಶ್​

ಡಾ.ಹೆಚ್.ಸಿ.ಮಹದೇವಪ್ಪ

ಈಶ್ವರ ಖಂಡ್ರೆ

ಕೆ.ಎನ್.ರಾಜಣ್ಣ

ದಿನೇಶ್ ಗುಂಡೂರಾವ್​​

ಶರಣಬಸಪ್ಪ ದರ್ಶನಾಪುರ

ಶಿವಾನಂದ ಪಾಟೀಲ್

ಆರ್.ಬಿ.ತಿಮ್ಮಾಪುರ

ಎಸ್.ಎಸ್.ಮಲ್ಲಿಕಾರ್ಜುನ

ಶಿವರಾಜ ತಂಗಡಗಿ

ಡಾ.ಶರಣ ಪ್ರಕಾಶ್ ಪಾಟೀಲ್

ಮಂಕಾಳು ವೈದ್ಯ

ಲಕ್ಷ್ಮೀ ಹೆಬ್ಬಾಳ್ಕರ್​

ರಹೀಂ ಖಾನ್

ಡಿ.ಸುಧಾಕರ್

ಸಂತೋಷ್ ಲಾಡ್​

ಬೋಸರಾಜು

ಬಿ.ಎಸ್.ಸುರೇಶ್

ಮಧು ಬಂಗಾರಪ್ಪ

ಎಂ.ಸಿ.ಸುಧಾಕರ್

ಬಿ.ನಾಗೇಂದ್ರ

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago