BREAKING NEWS

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಹೊಸ ಪ್ರಕರಣ ಪತ್ತೆ, 441 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 252 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 441 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1031 ಇದೆ. ಕೊನೆಯ 24 ಗಂಟೆಗಳಲ್ಲಿ 7359 ಟೆಸ್ಟ್‌ಗಳು ನಡೆದಿವೆ, 6514 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 845 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.42% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 56 ವರ್ಷದ ಪುರುಷ ಹಾಗೂ ಬಳ್ಳಾರಿಯಲ್ಲಿ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 69 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 50 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 18 ಮಂದಿ ಐಸಿಯುನಲ್ಲಿದ್ದಾರೆ ಹಾಗೂ ಓರ್ವ ಸೋಂಕಿತ ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 8 ಹಾಗೂ ಕೊಡಗಿನಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 91, ಮಂಡ್ಯದಲ್ಲಿ 20, ಕೊಡಗಿನಲ್ಲಿ 9 ಹಾಗೂ ಚಾಮರಾಜನಗರದಲ್ಲಿ 12 ಸಕ್ರಿಯ ಪ್ರಕರಣಗಳಿವೆ.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

6 hours ago