BREAKING NEWS

ಮೊಹಮ್ಮದ್‌ ಶಮಿ ಸೇರಿ ಒಟ್ಟು 26 ಅಥ್ಲೀಟ್‌ಗಳಿಗೆ ಅರ್ಜುನ ಪ್ರಶಸ್ತಿ ಪ್ರಕಟ

ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟೀಮ್‌ ಇಂಡಿಯಾ ಕ್ರಿಕೆಟರ್‌ ಮೊಹಮ್ಮದ್‌ ಶಮಿ ಸೇರಿದಂತೆ ಒಟ್ಟು 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಂಕಿರೆಡ್ಡಿ ಮತ್ತು ಚಿರಾಗ್‌ ರೆಡ್ಡಿ ಸ್ಟಾರ್‌ ಬ್ಯಾಡ್ಮಿಂಟನ್‌ ಜೋಡಿ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಸಂಪೂರ್ಣ ಪಟ್ಟಿ:

2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ (ಬ್ಯಾಡ್ಮಿಂಟನ್)

ಅರ್ಜುನ ಪ್ರಶಸ್ತಿಗಳು: ಓಜಸ್ ಪ್ರವೀಣ್ ದಿಯೋಟಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಪಾರುಲ್ ಚೌಧರಿ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ಮೊಹಮ್ಮದ್ ಶಮಿ (ಕ್ರಿಕೆಟ್), ಅನುಷ್ ಅಗರವಾಲ್ ( ಕುದುರೆ ಸವಾರಿ), ದಿವ್ಯಾಕೃತಿ ಸಿಂಗ್ (ಕುದುರೆ ಸವಾರಿ), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಠಾಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್ ಕುಮಾರ್ (ಕಬಡ್ಡಿ), ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ-ಖೋ), ಪಿಂಕಿ ( ಲಾನ್ ಬೌಲ್ಸ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಇಶಾ ಸಿಂಗ್ (ಶೂಟಿಂಗ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್), ಸುನಿಲ್ ಕುಮಾರ್ (ಕುಸ್ತಿ), ಅಂತಿಮ್ (ಕುಸ್ತಿ), ನವೋರೆಮ್ ರೋಶಿಬಿನಾ ದೇವಿ (ವುಶು) , ಶೀತಲ್ ದೇವಿ (ಪ್ಯಾರಾ ಆರ್ಚರಿ), ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್).

ದ್ರೋಣಾಚಾರ್ಯ ಪ್ರಶಸ್ತಿ: ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಖ್ಕರ್ (ಮಲ್ಲಗಂಬ)

ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ಶ್ರೇಷ್ಠ ಸಾಧನೆ): ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಭಾಸ್ಕರನ್ ಇ (ಕಬಡ್ಡಿ), ಜಯಂತ ಕುಮಾರ್ ಪುಶಿಲಾಲ್ (ಟೇಬಲ್ ಟೆನಿಸ್).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ: ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago