BREAKING NEWS

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 260 ಹೊಸ ಪ್ರಕರಣ ಪತ್ತೆ; ಒಂದೇ ದಿನ 228 ಮಂದಿ ಡಿಸ್‌ಚಾರ್ಜ್‌

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 260 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 228 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1175 ಇದೆ. ಕೊನೆಯ 24 ಗಂಟೆಗಳಲ್ಲಿ 7497 ಟೆಸ್ಟ್‌ಗಳು ನಡೆದಿವೆ, 6621 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 876 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.46% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದಾರೆ. ಕೊಪ್ಪಳದ 39 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.

ಒಟ್ಟು 1175 ಸಕ್ರಿಯ ಪ್ರಕರಣಗಳ ಪೈಕಿ 1107 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 68 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 45 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, ಇಬ್ಬರು ಸೋಂಕಿತರು ಆಮ್ಲಜನಕ ಸಪೋರ್ಟ್‌ ಐಸೋಲೇಷನ್‌ ಬೆಡ್‌ನಲ್ಲಿದ್ದಾರೆ, 17 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 4 ಸೋಂಕಿತರು ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 24, ಮಂಡ್ಯದಲ್ಲಿ 8 ಹಾಗೂ ಚಾಮರಾಜನಗರದಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 83, ಮಂಡ್ಯದಲ್ಲಿ 35 ಹಾಗೂ ಚಾಮರಾಜನಗರದಲ್ಲಿ 21 ಸಕ್ರಿಯ ಪ್ರಕರಣಗಳಿವೆ.

andolana

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

6 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago