ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 260 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 228 ಜನ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1175 ಇದೆ. ಕೊನೆಯ 24 ಗಂಟೆಗಳಲ್ಲಿ 7497 ಟೆಸ್ಟ್ಗಳು ನಡೆದಿವೆ, 6621 ಆರ್ಟಿಪಿಸಿಆರ್ ಟೆಸ್ಟ್ಗಳು ನಡೆದಿವೆ ಹಾಗೂ 876 ರ್ಯಾಟ್ ಟೆಸ್ಟ್ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.46% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದಾರೆ. ಕೊಪ್ಪಳದ 39 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.
ಒಟ್ಟು 1175 ಸಕ್ರಿಯ ಪ್ರಕರಣಗಳ ಪೈಕಿ 1107 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 68 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 45 ಸೋಂಕಿತರು ಜನರಲ್ ಬೆಡ್ನಲ್ಲಿದ್ದು, ಇಬ್ಬರು ಸೋಂಕಿತರು ಆಮ್ಲಜನಕ ಸಪೋರ್ಟ್ ಐಸೋಲೇಷನ್ ಬೆಡ್ನಲ್ಲಿದ್ದಾರೆ, 17 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 4 ಸೋಂಕಿತರು ವೆಂಟಿಲೇಟರ್ ಸೌಲಭ್ಯವಿರುವ ಐಸಿಯು ವಾರ್ಡ್ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 24, ಮಂಡ್ಯದಲ್ಲಿ 8 ಹಾಗೂ ಚಾಮರಾಜನಗರದಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 83, ಮಂಡ್ಯದಲ್ಲಿ 35 ಹಾಗೂ ಚಾಮರಾಜನಗರದಲ್ಲಿ 21 ಸಕ್ರಿಯ ಪ್ರಕರಣಗಳಿವೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…