BREAKING NEWS

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೇ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ. ಇದರೊಂದಿಗೆ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್​ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹಂಚಿಕೆ ಸಂಬಂಧಿಸಿದಂತೆ ಪ್ರವರ್ಗ 2ಎ ಸೇರ್ಪಡೆ ಮಾಡುವ ಅಥವಾ 2ಸಿ, 2ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು.

ಆದ್ರೆ, ಇದೀಗ 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದ್ದರಿಂದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಪಂಚಮಸಾಲಿ ಮೀಸಲು ಬಗ್ಗೆ ಶುಕ್ರವಾರ ನಿರ್ಧಾರ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಕೊನೆಯದು ಎನ್ನಲಾಗಿರುವ ಮಹತ್ವದ ಸಭೆ ಶುಕ್ರವಾರ ನಡೆಯಲಿದ್ದು, ಸಾಕಷ್ಟು ಚರ್ಚೆಗೆ ಈಡು ಮಾಡಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಇದಲ್ಲದೆ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ವಿವಿಧ ಸಮುದಾಯಗಳನ್ನು ಓಲೈಸುವ ನಿಟ್ಟಿನಲ್ಲಿ ಹಲವು ಪ್ರಮುಖ ಕೊಡುಗೆಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮುಂದಿನ ವಾರಾಂತ್ಯದ ವೇಳೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುವ ಸಂಭವವಿದೆ. ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿರುವುದರಿಂದ ಬಹುಶಃ ಶುಕ್ರವಾರದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವುದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

lokesh

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

4 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

4 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

4 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

5 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

5 hours ago