BREAKING NEWS

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೇ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ. ಇದರೊಂದಿಗೆ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್​ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹಂಚಿಕೆ ಸಂಬಂಧಿಸಿದಂತೆ ಪ್ರವರ್ಗ 2ಎ ಸೇರ್ಪಡೆ ಮಾಡುವ ಅಥವಾ 2ಸಿ, 2ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು.

ಆದ್ರೆ, ಇದೀಗ 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದ್ದರಿಂದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಪಂಚಮಸಾಲಿ ಮೀಸಲು ಬಗ್ಗೆ ಶುಕ್ರವಾರ ನಿರ್ಧಾರ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಕೊನೆಯದು ಎನ್ನಲಾಗಿರುವ ಮಹತ್ವದ ಸಭೆ ಶುಕ್ರವಾರ ನಡೆಯಲಿದ್ದು, ಸಾಕಷ್ಟು ಚರ್ಚೆಗೆ ಈಡು ಮಾಡಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಇದಲ್ಲದೆ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ವಿವಿಧ ಸಮುದಾಯಗಳನ್ನು ಓಲೈಸುವ ನಿಟ್ಟಿನಲ್ಲಿ ಹಲವು ಪ್ರಮುಖ ಕೊಡುಗೆಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮುಂದಿನ ವಾರಾಂತ್ಯದ ವೇಳೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುವ ಸಂಭವವಿದೆ. ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿರುವುದರಿಂದ ಬಹುಶಃ ಶುಕ್ರವಾರದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವುದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

lokesh

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

12 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

13 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

13 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

14 hours ago