BREAKING NEWS

ರಾಜ್ಯದಲ್ಲಿ ಗ್ರಾಮೀಣ ನೀರು ಸರಬರಾಜಿಗೆ ವಿಶ್ವಬ್ಯಾಂಕ್‌ನಿಂದ 3,000 ಕೋಟಿ ರೂ. ನೆರವು

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರಕಾರದ ಪ್ರಸ್ತಾವಿತ ಯೋಜನೆಗೆ ವಿಶ್ವಬ್ಯಾಂಕ್‌ 363 ಮಿಲಿಯನ್‌ ಡಾಲರ್‌ (ಸುಮಾರು 3,000 ಕೋಟಿ ರೂ.) ಸಾಲ ನೀಡಲು ಸಮ್ಮತಿಸಿದೆ.
ರಾಜ್ಯದ 31 ಜಿಲ್ಲೆಗಳ ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಮೂಲಕ ಒಂದು ಕೋಟಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. ನೀರಿನ ಸಂಪರ್ಕ ಜಾಲ ವಿಸ್ತರಿಸಿ ಸಮರ್ಪಕವಾಗಿ ನೀರು ಹಂಚಿಕೆ ಮಾಡಲು ವಿಶ್ವ ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸಿದೆ.
ವಿಶ್ವ ಬ್ಯಾಂಕ್‌ ನಿರ್ದೇಶಕರ ಕಾರ್ಯಕಾರಿ ಮಂಡಳಿ 363 ದಶಲಕ್ಷ ಡಾಲರ್‌ ಮೊತ್ತದ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಕರ್ನಾಟಕದ ಶೇ. 77ರಷ್ಟು ಭಾಗ ಒಣ ಭೂಮಿಯಿಂದ ಕೂಡಿದೆ. ಹವಾಮಾನ ವೈಪರೀತ್ಯದಿಂದ ಕೆಲವು ಸಲ ಬರಗಾಲ, ಕೆಲವು ಬಾರಿ ಪ್ರವಾಹ, ಪ್ರಕೋಪಗಳಿಗೆ ತುತ್ತಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿಅಂತರ್ಜಲ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದು, ನೀರಿನ ಗುಣಮಟ್ಟವೂ ಕ್ಷಿಣಿಸಿದೆ. ಹೀಗಾಗಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕದ ಪ್ರಸ್ತಾವಿತ ಯೋಜನೆಗೆ ಸಮ್ಮತಿ ನೀಡಲಾಗಿದೆ ಎಂದು ವಿಶ್ವ ಬ್ಯಾಂಕ್‌ ತಿಳಿಸಿದೆ.
“ಭಾರತದ ಗ್ರಾಮೀಣ ಭಾಗದ ಮನೆಗಳಿಗೆ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಅಗತ್ಯ ಆರ್ಥಿಕ ಸಹಕಾರ ನೀಡಲಾಗುವುದು,” ಎಂದು ವಿಶ್ವ ಬ್ಯಾಂಕ್‌ನಲ್ಲಿ ಭಾರತದ ನಿರ್ದೇಶಕರಾಗಿರುವ ಅಗಸ್ಟೆ ಟ್ಯಾನೊ ಕೌಮೆ ಹೇಳಿದ್ದಾರೆ.
500 ಕಿರು ಜಲಾಶಯ : ಕಳೆದೊಂದು ದಶಕದಿಂದ ಗ್ರಾಮೀಣ ಭಾಗಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಯೋಜನೆ ಕಾರ್ಯಾಚರಣೆಯಲ್ಲಿದೆ. ಆದರೆ ಸೂಕ್ತ ಸೌಲಭ್ಯಗಳಿಲ್ಲದೇ ಉದ್ದೇಶಿತ ಯೋಜನೆಗೆ ಹಿನ್ನಡೆಯಾಗಿದೆ. ಸಣ್ಣ ಪುಟ್ಟ ಲೋಪದೋಷ ಸರಿಪಡಿಸಿಕೊಂಡು ಪೂರ್ಣ ಪ್ರಮಾಣದಲ್ಲಿ ಯೋಜನೆ ಕಾರ್ಯಗತಗೊಳಿಸುವಂತೆ ರಾಜ್ಯ ಸರಕಾರಕ್ಕೆ ವಿಶ್ವ ಬ್ಯಾಂಕ್‌ ಸೂಚಿಸಿದೆ.
ಯೋಜನೆಯಡಿ ನೀರಿನ ಅಭಾವ ಎದುರಿಸುತ್ತಿರುವ ಏಳು ಜಿಲ್ಲೆಗಳಲ್ಲಿ 500 ಕಿರು ಜಲಾಶಯಗಳ ನಿರ್ಮಾಣ, ಪುನರುಜ್ಜೀವನಗೊಳಿಸಿ ಅಂತರ್ಜಲ ವೃದ್ಧಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ವಿಶ್ವ ಬ್ಯಾಂಕ್‌ ನಿರ್ದೇಶನ ನೀಡಿದೆ. 500 ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಮನೆಗಳಿಗೆ ನೀರು ಪೂರೈಸುವ ಉದ್ದೇಶವನ್ನೂ ಈ ಯೋಜನೆ ಹೊಂದಿದೆ.

lokesh

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

28 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago