BREAKING NEWS

ರಾಜ್ಯದಲ್ಲಿ ಗ್ರಾಮೀಣ ನೀರು ಸರಬರಾಜಿಗೆ ವಿಶ್ವಬ್ಯಾಂಕ್‌ನಿಂದ 3,000 ಕೋಟಿ ರೂ. ನೆರವು

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರಕಾರದ ಪ್ರಸ್ತಾವಿತ ಯೋಜನೆಗೆ ವಿಶ್ವಬ್ಯಾಂಕ್‌ 363 ಮಿಲಿಯನ್‌ ಡಾಲರ್‌ (ಸುಮಾರು 3,000 ಕೋಟಿ ರೂ.) ಸಾಲ ನೀಡಲು ಸಮ್ಮತಿಸಿದೆ.
ರಾಜ್ಯದ 31 ಜಿಲ್ಲೆಗಳ ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಮೂಲಕ ಒಂದು ಕೋಟಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. ನೀರಿನ ಸಂಪರ್ಕ ಜಾಲ ವಿಸ್ತರಿಸಿ ಸಮರ್ಪಕವಾಗಿ ನೀರು ಹಂಚಿಕೆ ಮಾಡಲು ವಿಶ್ವ ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸಿದೆ.
ವಿಶ್ವ ಬ್ಯಾಂಕ್‌ ನಿರ್ದೇಶಕರ ಕಾರ್ಯಕಾರಿ ಮಂಡಳಿ 363 ದಶಲಕ್ಷ ಡಾಲರ್‌ ಮೊತ್ತದ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಕರ್ನಾಟಕದ ಶೇ. 77ರಷ್ಟು ಭಾಗ ಒಣ ಭೂಮಿಯಿಂದ ಕೂಡಿದೆ. ಹವಾಮಾನ ವೈಪರೀತ್ಯದಿಂದ ಕೆಲವು ಸಲ ಬರಗಾಲ, ಕೆಲವು ಬಾರಿ ಪ್ರವಾಹ, ಪ್ರಕೋಪಗಳಿಗೆ ತುತ್ತಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿಅಂತರ್ಜಲ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದು, ನೀರಿನ ಗುಣಮಟ್ಟವೂ ಕ್ಷಿಣಿಸಿದೆ. ಹೀಗಾಗಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕದ ಪ್ರಸ್ತಾವಿತ ಯೋಜನೆಗೆ ಸಮ್ಮತಿ ನೀಡಲಾಗಿದೆ ಎಂದು ವಿಶ್ವ ಬ್ಯಾಂಕ್‌ ತಿಳಿಸಿದೆ.
“ಭಾರತದ ಗ್ರಾಮೀಣ ಭಾಗದ ಮನೆಗಳಿಗೆ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಅಗತ್ಯ ಆರ್ಥಿಕ ಸಹಕಾರ ನೀಡಲಾಗುವುದು,” ಎಂದು ವಿಶ್ವ ಬ್ಯಾಂಕ್‌ನಲ್ಲಿ ಭಾರತದ ನಿರ್ದೇಶಕರಾಗಿರುವ ಅಗಸ್ಟೆ ಟ್ಯಾನೊ ಕೌಮೆ ಹೇಳಿದ್ದಾರೆ.
500 ಕಿರು ಜಲಾಶಯ : ಕಳೆದೊಂದು ದಶಕದಿಂದ ಗ್ರಾಮೀಣ ಭಾಗಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಯೋಜನೆ ಕಾರ್ಯಾಚರಣೆಯಲ್ಲಿದೆ. ಆದರೆ ಸೂಕ್ತ ಸೌಲಭ್ಯಗಳಿಲ್ಲದೇ ಉದ್ದೇಶಿತ ಯೋಜನೆಗೆ ಹಿನ್ನಡೆಯಾಗಿದೆ. ಸಣ್ಣ ಪುಟ್ಟ ಲೋಪದೋಷ ಸರಿಪಡಿಸಿಕೊಂಡು ಪೂರ್ಣ ಪ್ರಮಾಣದಲ್ಲಿ ಯೋಜನೆ ಕಾರ್ಯಗತಗೊಳಿಸುವಂತೆ ರಾಜ್ಯ ಸರಕಾರಕ್ಕೆ ವಿಶ್ವ ಬ್ಯಾಂಕ್‌ ಸೂಚಿಸಿದೆ.
ಯೋಜನೆಯಡಿ ನೀರಿನ ಅಭಾವ ಎದುರಿಸುತ್ತಿರುವ ಏಳು ಜಿಲ್ಲೆಗಳಲ್ಲಿ 500 ಕಿರು ಜಲಾಶಯಗಳ ನಿರ್ಮಾಣ, ಪುನರುಜ್ಜೀವನಗೊಳಿಸಿ ಅಂತರ್ಜಲ ವೃದ್ಧಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ವಿಶ್ವ ಬ್ಯಾಂಕ್‌ ನಿರ್ದೇಶನ ನೀಡಿದೆ. 500 ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಮನೆಗಳಿಗೆ ನೀರು ಪೂರೈಸುವ ಉದ್ದೇಶವನ್ನೂ ಈ ಯೋಜನೆ ಹೊಂದಿದೆ.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

12 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

12 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

12 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

12 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

12 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

13 hours ago