BREAKING NEWS

ಇಂದಿನಿಂದ 3 ದಿನ ಹೊಸ ಸರ್ಕಾರದ ಮೊದಲ ಅಧಿವೇಶನ : ವಿಧಾನಸೌಧ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಆದೇಶಿಸಿದ್ದಾರೆ.

ಮೇ.22 ರಿಂದ 24ರವರೆಗೆ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣವಚನ ಹಾಗೂ ಕೊನೆಯ ದಿನ ಹೊಸ ಸಭ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರು ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಇದರಿಂದ ಅಧಿವೇಶನದ ಕಾರ್ಯ-ಕಲಾಪಗಳಿಗೆ ಅಡಚಣೆಯಾಗಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 6 ರಿಂದ ಬುಧವಾರ ಮಧ್ಯರಾತ್ರಿ 12ರವರೆಗೆ ವಿಧಾನಸೌಧದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಈ ಆದೇಶದ ಅನ್ವಯ ನಿಷೇಧ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಗಳು, ದೊಣ್ಣೆಗಳು, ಕತ್ತಿ, ಈಟಿ ಮೊದಲಾದ ಮಾರಕಾಸ್ತ್ರ ಒಯ್ಯುವಂತಿಲ್ಲ. ಯಾವುದೇ ರೀತಿ ಸ್ಫೋಟಕ ವಸ್ತುಗಳನ್ನು ಸಿಡಿಸುವಂತಿಲ್ಲ. ಉಪಕರಣ ಸಾಗಾಟ, ಶೇಖರಣೆಯನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ, ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

lokesh

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

10 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

14 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

15 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 hours ago