BREAKING NEWS

ಇಂದಿನಿಂದ 3 ದಿನ ಹೊಸ ಸರ್ಕಾರದ ಮೊದಲ ಅಧಿವೇಶನ : ವಿಧಾನಸೌಧ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಆದೇಶಿಸಿದ್ದಾರೆ.

ಮೇ.22 ರಿಂದ 24ರವರೆಗೆ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣವಚನ ಹಾಗೂ ಕೊನೆಯ ದಿನ ಹೊಸ ಸಭ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರು ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಇದರಿಂದ ಅಧಿವೇಶನದ ಕಾರ್ಯ-ಕಲಾಪಗಳಿಗೆ ಅಡಚಣೆಯಾಗಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 6 ರಿಂದ ಬುಧವಾರ ಮಧ್ಯರಾತ್ರಿ 12ರವರೆಗೆ ವಿಧಾನಸೌಧದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಈ ಆದೇಶದ ಅನ್ವಯ ನಿಷೇಧ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಗಳು, ದೊಣ್ಣೆಗಳು, ಕತ್ತಿ, ಈಟಿ ಮೊದಲಾದ ಮಾರಕಾಸ್ತ್ರ ಒಯ್ಯುವಂತಿಲ್ಲ. ಯಾವುದೇ ರೀತಿ ಸ್ಫೋಟಕ ವಸ್ತುಗಳನ್ನು ಸಿಡಿಸುವಂತಿಲ್ಲ. ಉಪಕರಣ ಸಾಗಾಟ, ಶೇಖರಣೆಯನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ, ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

lokesh

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

2 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

2 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago