BREAKING NEWS

ಪಂಚಮಸಾಲಿ ಮೀಸಲಾತಿ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ – ಶ್ರೀ ವಚನಾನಂದ ಮಹಾಸ್ವಾಮೀಜಿ

ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ.
ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.
ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago