ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ.
ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್ ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.
ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…