BREAKING NEWS

ಪಂಚಮಸಾಲಿ ಮೀಸಲಾತಿ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ – ಶ್ರೀ ವಚನಾನಂದ ಮಹಾಸ್ವಾಮೀಜಿ

ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ.
ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.
ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago