ಬೆಳಗಾವಿ : ಕಲಬುರಗಿಯಲ್ಲಿ ವಕೀಲರ ಕೊಲೆ ಮತ್ತು ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಹಲ್ಲೆ ಬೆನ್ನಲ್ಲೇ ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.
2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್ ವಿಧಾನ ಸಭೆಯಲ್ಲಿ ಮಂಡಿಸಿದ್ದಾರೆ.
ವಕೀಲರ ಮೇಲೆ ಹಲ್ಲೆ ತಡೆಯುವ ನಿಟ್ಟಿನಲ್ಲಿ ಈ ವಿಧೇಯಕವನ್ನು ತರಲಾಗಿದ್ದು, ಈ ವಿಧೇಯಕ ಅಂಗೀಕಾರಗೊಂಡಲ್ಲಿ, ವಕೀಲರಿಗೆ ಕಾನೂನು ರಕ್ಷಣೆ ಸಿಗಲಿದೆ. ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ ವಿಧಿಸುವ ಕಾನೂನು ಜಾರಿಯಾಗಲಿದೆ.
ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 10ನೇ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ಸಂರಕ್ಷಣಾ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು.
ಪ್ರಮುಖ ಅಂಶಗಳೇನು?
ವಕೀಲರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗೆ 6 ತಿಂಗಳಿಂದ 3 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು.
ಪೊಲೀಸರು ಯಾವೊಬ್ಬ ವಕೀಲರನ್ನು ಬಂಸಿದರೆ 24 ಗಂಟೆಯೊಳಗಾಗಿ ವಕೀಲರ ಸಂಘಕ್ಕೆ ಮಾಹಿತಿ ನೀಡಬೇಕು.
ಬೆದರಿಕೆ, ಕೆಲಸಕ್ಕೆ ಅಡ್ಡಿ, ಕಿರುಕುಳ ನೀಡಿದರೆ ಶಿಕ್ಷೆ ಆಗಲಿದೆ.
ದೇಶ- ವಿದೇಶದಲ್ಲಿ ಮುಕ್ತವಾಗಿ ಪ್ರಯಾಣಿಸಲು ಹಾಗೂ ಕಕ್ಷಿದಾರರೊಂದಿಗೆ ಸಮಾಲೋಚಿಸಲು ವಿಧೇಯಕದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.
ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದ ವಕೀಲರ ಸಂಘ, ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕಾಯ್ದೆ ಅನುಮೋದನೆಗೆ ಮನವಿ ಮಾಡಿತ್ತು.
ಚಿಕ್ಕಮಗಳೂರಲ್ಲಿ ಹಲ್ಲೆ, ಕಲಬುರಗಿಯಲ್ಲಿ ಕೊಲೆ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇತ್ತ ಮಂಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆಯಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಈ ಎರಡೂ ಘಟನೆಗಳನ್ನು ಖಂಡಿಸಿ ಮೈಸೂರು, ಕೂಡ್ಲಿಗಿ, ಕಲಬುರಗಿ ಮುಂತಾಡೆದೆ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದವು ಈ ಸಂದರ್ಭದಲ್ಲಿ ವಕೀಲ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ವಕೀಲರ ಮನವಿ ಮಾಡಿತ್ತು.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…