BREAKING NEWS

ವಕೀಲರ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು ಶಿಕ್ಷೆ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಳಗಾವಿ : ಕಲಬುರಗಿಯಲ್ಲಿ ವಕೀಲರ ಕೊಲೆ ಮತ್ತು ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಹಲ್ಲೆ ಬೆನ್ನಲ್ಲೇ ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.

2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್ ವಿಧಾನ ಸಭೆಯಲ್ಲಿ ಮಂಡಿಸಿದ್ದಾರೆ.

ವಕೀಲರ ಮೇಲೆ ಹಲ್ಲೆ ತಡೆಯುವ ನಿಟ್ಟಿನಲ್ಲಿ ಈ ವಿಧೇಯಕವನ್ನು‌ ತರಲಾಗಿದ್ದು, ಈ ವಿಧೇಯಕ ಅಂಗೀಕಾರಗೊಂಡಲ್ಲಿ, ವಕೀಲರಿಗೆ ಕಾನೂನು ರಕ್ಷಣೆ ಸಿಗಲಿದೆ. ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ‌‌ ವಿಧಿಸುವ ಕಾನೂನು ಜಾರಿಯಾಗಲಿದೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 10ನೇ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ಸಂರಕ್ಷಣಾ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು.

ಪ್ರಮುಖ ಅಂಶಗಳೇನು?
ವಕೀಲರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗೆ 6 ತಿಂಗಳಿಂದ 3 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು.
ಪೊಲೀಸರು ಯಾವೊಬ್ಬ ವಕೀಲರನ್ನು ಬಂಸಿದರೆ 24 ಗಂಟೆಯೊಳಗಾಗಿ ವಕೀಲರ ಸಂಘಕ್ಕೆ ಮಾಹಿತಿ ನೀಡಬೇಕು.
ಬೆದರಿಕೆ, ಕೆಲಸಕ್ಕೆ ಅಡ್ಡಿ, ಕಿರುಕುಳ ನೀಡಿದರೆ ಶಿಕ್ಷೆ ಆಗಲಿದೆ.
ದೇಶ- ವಿದೇಶದಲ್ಲಿ ಮುಕ್ತವಾಗಿ ಪ್ರಯಾಣಿಸಲು ಹಾಗೂ ಕಕ್ಷಿದಾರರೊಂದಿಗೆ ಸಮಾಲೋಚಿಸಲು ವಿಧೇಯಕದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.

ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದ ವಕೀಲರ ಸಂಘ, ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕಾಯ್ದೆ ಅನುಮೋದನೆಗೆ ಮನವಿ ಮಾಡಿತ್ತು.

ಚಿಕ್ಕಮಗಳೂರಲ್ಲಿ ಹಲ್ಲೆ, ಕಲಬುರಗಿಯಲ್ಲಿ ಕೊಲೆ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇತ್ತ ಮಂಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆಯಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

ಈ ಎರಡೂ ಘಟನೆಗಳನ್ನು ಖಂಡಿಸಿ ಮೈಸೂರು, ಕೂಡ್ಲಿಗಿ, ಕಲಬುರಗಿ ಮುಂತಾಡೆದೆ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದವು ಈ ಸಂದರ್ಭದಲ್ಲಿ ವಕೀಲ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ವಕೀಲರ ಮನವಿ ಮಾಡಿತ್ತು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago