ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಅಸ್ವಸ್ಥರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಮತ್ತು ಅರಕೇರಾ ಮತ್ತು ದೇವದುರ್ಗದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.
2022ರ ಜೂನ್ನಲ್ಲಿ ರಾಯಚೂರು ಪಟ್ಟಣದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದರು ಮತ್ತು 23 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು.
ರಾಯಚೂರು ಜಿಲ್ಲೆ ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…