BREAKING NEWS

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 328 ಹೊಸ ಕೊವಿಡ್ ಪ್ರಕರಣ ಪತ್ತೆ, 409 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 328 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 409 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1159 ಇದೆ. ಕೊನೆಯ 24 ಗಂಟೆಗಳಲ್ಲಿ 7205 ಟೆಸ್ಟ್‌ಗಳು ನಡೆದಿವೆ, 6418 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 787 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 4.55% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 1159 ಸಕ್ರಿಯ ಪ್ರಕರಣಗಳ ಪೈಕಿ 1087 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 72 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 51 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 9 ಸೋಂಕಿತರು ಆಮ್ಲಜನಕ ಸಪೋರ್ಟ್‌ ಐಸೋಲೇಷನ್‌ ಬೆಡ್‌ನಲ್ಲಿದ್ದಾರೆ, 9 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 3 ಸೋಂಕಿತರು ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 26, ಮಂಡ್ಯದಲ್ಲಿ 7, ಹಾಗೂ ಚಾಮರಾಜನಗರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 76, ಮಂಡ್ಯದಲ್ಲಿ 26, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 17 ಸಕ್ರಿಯ ಪ್ರಕರಣಗಳಿವೆ.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

5 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

6 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

7 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

7 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

8 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

8 hours ago