BREAKING NEWS

ಬೆಂ-ಮೈ ಹೆದ್ದಾರಿಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತಗಳು, 121 ಸಾವುಗಳು: ನಿತಿನ್ ಗಡ್ಕರಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಇಂಡಿಯನ್ ರೋಡ್ ಕಾಂಗ್ರೆಸ್ (ಐಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ವೇಗ ಮಿತಿ ಸೂಚನಾ ಫಲಕಗಳನ್ನು ಅಳವಡಿಸಿದೆ ಎಂದು ಹೇಳಿದರು.

ಅಲ್ಲದೆ ನಾಲ್ಕು ಮಾರ್ಗದ ಗಸ್ತು ವಾಹನಗಳನ್ನು ನಿಯೋಜಿಸುವುದರ ಜೊತೆಗೆ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಹೆಚ್ಚುವರಿ ಮಾಹಿತಿ ಫಲಕಗಳನ್ನು ಸಹ ಒದಗಿಸಿದೆ. ಕ್ಯಾಮೆರಾ ಕಣ್ಗಾವಲು, ಓವರ್‌ಹೆಡ್ ಮಾಹಿತಿ ವೇರಿಯಬಲ್ ಮೆಸೇಜ್ ಸಿಗ್ನಲ್‌ಗಳು (ವಿಎಂಎಸ್) ಸೇರಿದಂತೆ ಇತರ ಸುರಕ್ಷತಾ ಕ್ರಮಗಳು ಮತ್ತು ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು ಮತ್ತು ಎಲ್ಲಾ ಮೋಟಾರು ರಹಿತ ವಾಹನಗಳನ್ನು ನಿಷೇಧಿಸುವ ಕ್ರಮ ಕೈಗೊಂಡಿದೆ. ಪೊಲೀಸರು ಇಂಟರ್‌ಸೆಪ್ಟರ್‌ಗಳೊಂದಿಗೆ ವೇಗದ ಮಿತಿಗಳನ್ನು ಜಾರಿಗೊಳಿಸುತ್ತಾರೆ ಎಂದು ಅವರು ವಿವರಿಸಿದರು.

ಪ್ರಥಮ ಚಿಕಿತ್ಸಾ ಸೌಲಭ್ಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಮೂಲಭೂತ ಜೀವಾಧಾರಕ ವ್ಯವಸ್ಥೆಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಯೊಂದಿಗೆ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಎಕ್ಸ್‌ಪ್ರೆಸ್‌ವೇನಲ್ಲಿ ತುರ್ತು ಪರಿಸ್ಥಿತಿಗಳ ಸಂದರ್ಭಗಳಿಗೆ ನಿಯೋಜಿಸಲಾಗಿದೆ. ಟೋಲ್ ಪ್ಲಾಜಾದಲ್ಲಿ ಪ್ರಥಮ ಚಿಕಿತ್ಸೆಯೊಂದಿಗೆ ವೈದ್ಯಕೀಯ ಚಿಕಿತ್ಸಾ ಪೋಸ್ಟ್ ಅನ್ನು ಸಹ ಒದಗಿಸಲಾಗಿದೆ ಎಂದರು.

ಹೆದ್ದಾರಿಯಲ್ಲಿ ಟೋಲ್ ಶುಲ್ಕದ ಬಗ್ಗೆ ದೊಡ್ಡ ಪ್ರಮಾಣದ ಸಾರ್ವಜನಿಕ ಅಸಮಾಧಾನವಿದೆಯೇ ಎಂದು ಕೇಳಲಾದ ಪ್ರಶ್ನೆಗೆ, ತಿದ್ದುಪಡಿಗಳೊಂದಿಗೆ ಎನ್‌ಎಚ್ ಶುಲ್ಕ ನಿಯಮಗಳು 2008 ರ ಪ್ರಕಾರ ಬಳಕೆದಾರರ ಶುಲ್ಕವನ್ನು ವಿಧಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

andolanait

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

1 hour ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

1 hour ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

1 hour ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

2 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

2 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

2 hours ago