ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್ ಬಿಲ್ನ್ನು ಬಾಕಿ ಉಳಿಸಿಕೊಂಡಿದೆ. ಇನ್ನು ರೋಗಗ್ರಸ್ಥ ಕಾರ್ಖಾನೆ ಎಂದೆ ಬಿಂಬಿಸಿಕೊಂಡಿರುವ ಮೈಶುಗರ್ ಫ್ಯಾಕ್ಟರಿಗೆಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.
ವಿದ್ಯುತ್ ಪೂರೈಸುವಂತೆ ಇಂಧನ ಸಚಿವರಿಗೆ MLC ಗೂಳಿಗೌಡ ಪತ್ರ : ಇನ್ನು ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ಗೆ ಮನವಿ ಸಲ್ಲಿಸಿದ್ದಾರೆ.
ಮೈಶುಗರ್ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದ ಸಚಿವ ಶಿವಾನಂದ ಎಸ್ ಪಾಟೀಲ್ : ಇನ್ನು ಇತ್ತೀಚೆಗಷ್ಟೇ ಬಾಯ್ಲರ್ಗೆ ಬೆಂಕಿ ಹಾಕುವ ಮೂಲಕ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್ ಚಾಲನೆ ನೀಡಿದ್ದರು. ಅವರಿಗೆ ಸಚಿವ ಚಲುವರಾಯಸ್ವಾಮಿ ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದರು. ಈ ವೇಳೆ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದ್ದು,. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…