ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ–ನರೇಗಾ) ಅಡಿಯಲ್ಲಿ ಕಾರ್ಮಿಕರ ಮಕ್ಕಳ ಲಾಲನೆ-ಪೋಷಣೆಗಾಗಿ 4,000 ಕೂಸಿನ ಮನೆಗಳ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯು 4,000 ಶಿಶುವಿಹಾರಗಳ ತೆರೆಯಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ನರೇಗಾ ಯೋಜನೆಯ ನಿಯಮಗಳ ಪ್ರಕಾರ, ಯೋಜನೆಯಲ್ಲಿ ಮಹಿಳಾ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಲಾಗಿದೆ. ಇದರಂತೆ ಕನಿಷ್ಠ ಮೂರನೇ ಒಂದು ಭಾಗದಷ್ಟು ಫಲಾನುಭವಿಗಳು ಮಹಿಳೆಯರೇ ಆಗಿದ್ದು, ಬಹುತೇಕ ಹೆಣ್ಣುಮಕ್ಕಳು ಯುವತಿಯರು, ಮಗುವಿನ ತಾಯಿಯಂದಿರೇ ಆಗಿದ್ದಾರೆ.
ಶೇ.50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿರುವುದರಿಂದ ಕೆಲಸದೊಂದಿಗೆ ಮಕ್ಕಳ ಪೋಷಣೆ ಮಾಡಬೇಕಾಗುತ್ತದೆ. ಹೀಗಾಗಿಯೇ ಮಕ್ಕಳ ಪಾಲನೆ ಹಾಗೂ ಪೋಷಣೆಗೆ ಸರ್ಕಾರ ಶಿಶುವಿಹಾರಗಳ ತೆರೆಯಲು ನಿರ್ಧರಿಸಿದೆ.
ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಇದುವರೆಗೆ ನರೇಗಾ ಯೋಜನೆಯಡಿ ಕೆಲಸ ಮಾಡುವ ಮಹಿಳೆಯರ ಮಕ್ಕಳಿಗೆ ಕುಡಿಯುವ ನೀರು ಮತ್ತು ಆಶ್ರಯದಂತಹ ಸೌಕರ್ಯಗಳನ್ನು ಒದಗಿಸಲಾಗಿದೆ. ಇನ್ನು ಮುಂದೆ ಅಂತಹ ಸ್ಥಳಗಳಲ್ಲಿ ಶಿಶುವಿಹಾರಗಳ ತೆರೆಯಲಾಗುವುದು ಎಂದು ಹೇಳಿದರು.
ಕಾರ್ಮಿಕರ ಮಹಿಳೆಯರು ಕೆಲಸ ಮಾಡುವ ವೇಳೆ ಮಹಿಳೆಯೊಬ್ಬರು ಅವರ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಮಕ್ಕಳನ್ನು ನೋಡಿಕೊಳ್ಳುವ ಮಹಿಳೆಗೂ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಶಿಶುವಿಹಾರಗಳಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರವನ್ನು ನೀಡಲಾಗುವುದು. ಮಕ್ಕಳು ಆರು ವರ್ಷದವರಾದ ಬಳಿಕ ಅವರನ್ನು ಶಾಲೆಗೆ ಸೇರಿಸಲು ಶಿಶುವಿಹಾರಗಳು ಸಹಾಯ ಮಾಡುತ್ತವೆ ಎಂದು ಹೇಳಿದರು.
ಕರ್ನಾಟಕದಲ್ಲಿ 6,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…