BREAKING NEWS

ನರೇಗಾ ಯೋಜನೆಯಡಿ ಕಾರ್ಮಿಕರ ಮಕ್ಕಳಿಗಾಗಿ 4,000 ‘ಕೂಸಿನ ಮನೆ’: ರಾಜ್ಯ ಸರ್ಕಾರ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ–ನರೇಗಾ) ಅಡಿಯಲ್ಲಿ ಕಾರ್ಮಿಕರ ಮಕ್ಕಳ ಲಾಲನೆ-ಪೋಷಣೆಗಾಗಿ 4,000 ಕೂಸಿನ ಮನೆಗಳ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯು 4,000 ಶಿಶುವಿಹಾರಗಳ ತೆರೆಯಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನರೇಗಾ ಯೋಜನೆಯ ನಿಯಮಗಳ ಪ್ರಕಾರ, ಯೋಜನೆಯಲ್ಲಿ ಮಹಿಳಾ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಲಾಗಿದೆ. ಇದರಂತೆ ಕನಿಷ್ಠ ಮೂರನೇ ಒಂದು ಭಾಗದಷ್ಟು ಫಲಾನುಭವಿಗಳು ಮಹಿಳೆಯರೇ ಆಗಿದ್ದು, ಬಹುತೇಕ ಹೆಣ್ಣುಮಕ್ಕಳು ಯುವತಿಯರು, ಮಗುವಿನ ತಾಯಿಯಂದಿರೇ ಆಗಿದ್ದಾರೆ.

ಶೇ.50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿರುವುದರಿಂದ ಕೆಲಸದೊಂದಿಗೆ ಮಕ್ಕಳ ಪೋಷಣೆ ಮಾಡಬೇಕಾಗುತ್ತದೆ. ಹೀಗಾಗಿಯೇ ಮಕ್ಕಳ ಪಾಲನೆ ಹಾಗೂ ಪೋಷಣೆಗೆ ಸರ್ಕಾರ ಶಿಶುವಿಹಾರಗಳ ತೆರೆಯಲು ನಿರ್ಧರಿಸಿದೆ.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಇದುವರೆಗೆ ನರೇಗಾ ಯೋಜನೆಯಡಿ ಕೆಲಸ ಮಾಡುವ ಮಹಿಳೆಯರ ಮಕ್ಕಳಿಗೆ ಕುಡಿಯುವ ನೀರು ಮತ್ತು ಆಶ್ರಯದಂತಹ ಸೌಕರ್ಯಗಳನ್ನು ಒದಗಿಸಲಾಗಿದೆ. ಇನ್ನು ಮುಂದೆ ಅಂತಹ ಸ್ಥಳಗಳಲ್ಲಿ ಶಿಶುವಿಹಾರಗಳ ತೆರೆಯಲಾಗುವುದು ಎಂದು ಹೇಳಿದರು.

ಕಾರ್ಮಿಕರ ಮಹಿಳೆಯರು ಕೆಲಸ ಮಾಡುವ ವೇಳೆ ಮಹಿಳೆಯೊಬ್ಬರು ಅವರ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಮಕ್ಕಳನ್ನು ನೋಡಿಕೊಳ್ಳುವ ಮಹಿಳೆಗೂ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಶಿಶುವಿಹಾರಗಳಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರವನ್ನು ನೀಡಲಾಗುವುದು. ಮಕ್ಕಳು ಆರು ವರ್ಷದವರಾದ ಬಳಿಕ ಅವರನ್ನು ಶಾಲೆಗೆ ಸೇರಿಸಲು ಶಿಶುವಿಹಾರಗಳು ಸಹಾಯ ಮಾಡುತ್ತವೆ ಎಂದು ಹೇಳಿದರು.

ಕರ್ನಾಟಕದಲ್ಲಿ 6,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago