ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತ ಅವರ ವಿರುದ್ಧ ಚೆಕ್ಬೌನ್ಸ್ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.
ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ (ಎನ್ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.
ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್ಸಿಸಿಎಚ್ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022–23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ ₹8.15 ಲಕ್ಷ ಇತ್ತು. ₹17.89 ಲಕ್ಷ ಮೌಲ್ಯದ ಚರಾಸ್ತಿ, ₹2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹93.19 ಲಕ್ಷ ಸಾಲ ಇದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…