BREAKING NEWS

ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್‌ ಬೌನ್ಸ್‌ ಪ್ರಕರಣ

ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.
ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.

ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್‌ಸಿಸಿಎಚ್‌ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್‌ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್‌ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್‌ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.

ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022–23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ ₹8.15 ಲಕ್ಷ ಇತ್ತು. ₹17.89 ಲಕ್ಷ ಮೌಲ್ಯದ ಚರಾಸ್ತಿ, ₹2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹93.19 ಲಕ್ಷ ಸಾಲ ಇದೆ.

lokesh

Recent Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

7 mins ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

40 mins ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

1 hour ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

1 hour ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

1 hour ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

2 hours ago