ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತ ಅವರ ವಿರುದ್ಧ ಚೆಕ್ಬೌನ್ಸ್ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.
ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ (ಎನ್ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.
ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್ಸಿಸಿಎಚ್ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022–23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ ₹8.15 ಲಕ್ಷ ಇತ್ತು. ₹17.89 ಲಕ್ಷ ಮೌಲ್ಯದ ಚರಾಸ್ತಿ, ₹2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹93.19 ಲಕ್ಷ ಸಾಲ ಇದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…