ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತ ಅವರ ವಿರುದ್ಧ ಚೆಕ್ಬೌನ್ಸ್ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.
ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ (ಎನ್ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.
ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್ಸಿಸಿಎಚ್ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022–23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ ₹8.15 ಲಕ್ಷ ಇತ್ತು. ₹17.89 ಲಕ್ಷ ಮೌಲ್ಯದ ಚರಾಸ್ತಿ, ₹2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹93.19 ಲಕ್ಷ ಸಾಲ ಇದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…