ತಿರುಪತಿ: ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಜೆಟ್ ಮಂಡನೆಯಾಗಿದ್ದು, ಬರೋಬ್ಬರಿ 4,461 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2023-24ರ ವಾರ್ಷಿಕ ಬಜೆಟ್ ಅನ್ನು ಅನುಮೋದಿಸಲಾಗಿದೆ. ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬಜೆಟ್ ಅನ್ನು ಮಂಡಿಸಿದ್ದು, 1933ರಲ್ಲಿ ದೇವಾಲಯದ ಟ್ರಸ್ಟ್ ಆರಂಭವಾದ ಬಳಿಕ ಇದೇ ಅತಿ ಹೆಚ್ಚಿನ ಬಜೆಟ್ ಅಂದಾಜು ಆಗಿದೆ.
ಬುಧವಾರ ಸುದ್ದಿಗೋಷ್ಠಿ ನಡೆಸಿದ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ, ಟಿಟಿಡಿ ಇಒ ಎವಿ. ಧರ್ಮಾರೆಡ್ಡಿ ಅವರು 4411.68 ಕೋಟಿ ರೂ. ಅಂದಾಜು ವೆಚ್ಚದ ವಾರ್ಷಿಕ ಬಜೆಟ್ ಅನ್ನು ಬಿಡುಗಡೆಗೊಳಿಸಿದರು. ಫೆಬ್ರವರಿ 15ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಪಡೆಯಲಾಗಿದೆ. ಆದರೆ, ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಮಹತ್ವದ ಯೋಜನೆಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಸಾಂಕ್ರಾಮಿಕದ ಬಳಿಕ ತಿರುಪತಿ ದೇವಸ್ಥಾನದ ಹುಂಡಿಯ ಆದಾಯವು ಅಚ್ಚರಿಯ ರೀತಿಯಲ್ಲಿ ಹೆಚ್ಚಾಗಿದೆ. ಕೋವಿಡ್ಗಿಂತ ಮೊದಲು ಹುಂಡಿಯಿಂದ ಸಂಗ್ರಹವಾಗುತ್ತಿದ್ದ ಆದಾಯ 1200 ಕೋಟಿ ರೂಪಾಯಿಗಳಷ್ಟಿದ್ದರೆ, 2022-23ರಲ್ಲಿ 1613 ಕೋಟಿಗ ರೂ.ಗಳಷ್ಟಿದೆ. ಕೋವಿಡ್ ಅವಧಿಯಲ್ಲಿನ ವರ್ಚುವಲ್ ಸೇವೆಗಳು ಮತ್ತು ಕೋವಿಡ್ ನಂತರದ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿ ಕೂಡ ತಿರುಪತಿ ತಿಮ್ಮಪ್ಪನ ಆದಾಯವನ್ನು ಮತ್ತಷ್ಟು ಹೆಚ್ಚಿಸಿವೆ ಎಂದು ಸುಬ್ಬಾರೆಡ್ಡಿ ಹೇಳಿದ್ದಾರೆ.
ಮತ್ತೊಂದೆಡೆ, 2023-2024ರ ಆರ್ಥಿಕ ವರ್ಷದ ವಾರ್ಷಿಕ ವೆಚ್ಚಗಳನ್ನು ಸಹ ಟಿಟಿಡಿ ಅಂದಾಜಿಸಿದೆ. ನೌಕರರಿಗೆ ವೇತನ ಪಾವತಿಗೆ 1,532.20 ಕೋಟಿ ರೂ. ನಿಗದಿಪಡಿಸಲಾಗಿದ್ದು, ಸಾಮಗ್ರಿ ಖರೀದಿಗೆ 690.50 ಕೋಟಿ ರೂ., ಕಾರ್ಪಸ್ ಮತ್ತು ಇತರ ಹೂಡಿಕೆಗಳಿಗೆ 600 ಕೋಟಿ ರೂ., ಇಂಜಿನಿಯರಿಂಗ್ ಕಾಮಗಾರಿಗಳಿಗೆ 300 ಕೋಟಿ ರೂ. ಮತ್ತು ಶ್ರೀನಿವಾಸ ಸೇತು ಕಾಮಗಾರಿಗೆ 25 ಕೋಟಿ ರೂ. ಮತ್ತು ಉದ್ಯೋಗಿಗಳಿಗೆ ಸಾಲ ಮತ್ತು ಮುಂಗಡ ನೀಡುವುದಕ್ಕಾಗಿ 151.62 ಕೋಟಿ ರೂ. ನಿಗದಿಪಡಿಸಲಾಗಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…