ತಿರುಪತಿ: ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಜೆಟ್ ಮಂಡನೆಯಾಗಿದ್ದು, ಬರೋಬ್ಬರಿ 4,461 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2023-24ರ ವಾರ್ಷಿಕ ಬಜೆಟ್ ಅನ್ನು ಅನುಮೋದಿಸಲಾಗಿದೆ. ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬಜೆಟ್ ಅನ್ನು ಮಂಡಿಸಿದ್ದು, 1933ರಲ್ಲಿ ದೇವಾಲಯದ ಟ್ರಸ್ಟ್ ಆರಂಭವಾದ ಬಳಿಕ ಇದೇ ಅತಿ ಹೆಚ್ಚಿನ ಬಜೆಟ್ ಅಂದಾಜು ಆಗಿದೆ.
ಬುಧವಾರ ಸುದ್ದಿಗೋಷ್ಠಿ ನಡೆಸಿದ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ, ಟಿಟಿಡಿ ಇಒ ಎವಿ. ಧರ್ಮಾರೆಡ್ಡಿ ಅವರು 4411.68 ಕೋಟಿ ರೂ. ಅಂದಾಜು ವೆಚ್ಚದ ವಾರ್ಷಿಕ ಬಜೆಟ್ ಅನ್ನು ಬಿಡುಗಡೆಗೊಳಿಸಿದರು. ಫೆಬ್ರವರಿ 15ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಪಡೆಯಲಾಗಿದೆ. ಆದರೆ, ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಮಹತ್ವದ ಯೋಜನೆಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಸಾಂಕ್ರಾಮಿಕದ ಬಳಿಕ ತಿರುಪತಿ ದೇವಸ್ಥಾನದ ಹುಂಡಿಯ ಆದಾಯವು ಅಚ್ಚರಿಯ ರೀತಿಯಲ್ಲಿ ಹೆಚ್ಚಾಗಿದೆ. ಕೋವಿಡ್ಗಿಂತ ಮೊದಲು ಹುಂಡಿಯಿಂದ ಸಂಗ್ರಹವಾಗುತ್ತಿದ್ದ ಆದಾಯ 1200 ಕೋಟಿ ರೂಪಾಯಿಗಳಷ್ಟಿದ್ದರೆ, 2022-23ರಲ್ಲಿ 1613 ಕೋಟಿಗ ರೂ.ಗಳಷ್ಟಿದೆ. ಕೋವಿಡ್ ಅವಧಿಯಲ್ಲಿನ ವರ್ಚುವಲ್ ಸೇವೆಗಳು ಮತ್ತು ಕೋವಿಡ್ ನಂತರದ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿ ಕೂಡ ತಿರುಪತಿ ತಿಮ್ಮಪ್ಪನ ಆದಾಯವನ್ನು ಮತ್ತಷ್ಟು ಹೆಚ್ಚಿಸಿವೆ ಎಂದು ಸುಬ್ಬಾರೆಡ್ಡಿ ಹೇಳಿದ್ದಾರೆ.
ಮತ್ತೊಂದೆಡೆ, 2023-2024ರ ಆರ್ಥಿಕ ವರ್ಷದ ವಾರ್ಷಿಕ ವೆಚ್ಚಗಳನ್ನು ಸಹ ಟಿಟಿಡಿ ಅಂದಾಜಿಸಿದೆ. ನೌಕರರಿಗೆ ವೇತನ ಪಾವತಿಗೆ 1,532.20 ಕೋಟಿ ರೂ. ನಿಗದಿಪಡಿಸಲಾಗಿದ್ದು, ಸಾಮಗ್ರಿ ಖರೀದಿಗೆ 690.50 ಕೋಟಿ ರೂ., ಕಾರ್ಪಸ್ ಮತ್ತು ಇತರ ಹೂಡಿಕೆಗಳಿಗೆ 600 ಕೋಟಿ ರೂ., ಇಂಜಿನಿಯರಿಂಗ್ ಕಾಮಗಾರಿಗಳಿಗೆ 300 ಕೋಟಿ ರೂ. ಮತ್ತು ಶ್ರೀನಿವಾಸ ಸೇತು ಕಾಮಗಾರಿಗೆ 25 ಕೋಟಿ ರೂ. ಮತ್ತು ಉದ್ಯೋಗಿಗಳಿಗೆ ಸಾಲ ಮತ್ತು ಮುಂಗಡ ನೀಡುವುದಕ್ಕಾಗಿ 151.62 ಕೋಟಿ ರೂ. ನಿಗದಿಪಡಿಸಲಾಗಿದೆ.
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…