BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

52 seconds ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

2 hours ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

3 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

3 hours ago