BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

3 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago