BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

4 mins ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

22 mins ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

28 mins ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

44 mins ago

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…

1 hour ago

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

2 hours ago