BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

10 mins ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

44 mins ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

1 hour ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

2 hours ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

3 hours ago