BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago